Webdunia - Bharat's app for daily news and videos

Install App

ಮೈತ್ರಿ ನಾಯಕರ ವಿರುದ್ಧವೇ ತಿರುಗಿ ಬಿದ್ದ ಮಂಡ್ಯ ಕೈ ಕಾರ್ಯಕರ್ತರು

Webdunia
ಗುರುವಾರ, 4 ಏಪ್ರಿಲ್ 2019 (16:28 IST)
ಮಂಡ್ಯ : ಮಂಡ್ಯ ರಾಜಕೀಯದಲ್ಲಿ ನಡೆಯುತ್ತಿರುವ ಘಟನೆಗಳು ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಇದೀಗ ಮಂಡ್ಯ ಕೈ ಕಾರ್ಯಕರ್ತರು ಪಕ್ಷದ ನಾಯಕರ ವಿರುದ್ಧವೇ ತಿರುಗಿಬಿದ್ದಿದ್ದಾರೆ.


ಹೌದು. ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕೀಳಿಯುತ್ತಿರುವ  ನಿಖಿಲ್ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದ ಮಂಡ್ಯದ ಕೈ ಕಾರ್ಯಕರ್ತರು ಇದೀಗ, ಕಾಂಗ್ರೆಸ್​ನ ಮಾಜಿ ಸಚಿವ ಅಂಬರೀಶ್​ ಅವರ ಪತ್ನಿ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದರಿಂದ ಆಕೆಗೆ ಬೆಂಬಲ ನೀಡಿ, ಕಾಂಗ್ರೆಸ್​ ಬಾವುಟ ಹಿಡಿದು ಪ್ರಚಾರದಲ್ಲಿ ಸಾಥ್​ ನೀಡುತ್ತಿದ್ದಾರೆ.


ಈ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಕೂಡ, ಪಕ್ಷೇತರ ಅಭ್ಯರ್ಥಿ ಪರ ಕಾಂಗ್ರೆಸ್​ ಬಾವುಟ ಹಿಡಿದು ಪ್ರಚಾರ ಮಾಡುವ ಕಾರ್ಯಕರ್ತರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಅಂಥವರು ಪಕ್ಷ ಬಿಟ್ಟು ಹೋಗಬಹುದು. ಬೇರೆ ಪಕ್ಷದ ಅಭ್ಯರ್ಥಿ ಜೊತೆಗೆ ನಮ್ಮ ಪಕ್ಷದ ಚಿಹ್ನೆ ಕಾಣಿಸಿಕೊಳ್ಳಬಾರದು. ಈ ಬಗ್ಗೆ ಚುನಾವಣಾ ಆಯೋಗಕ್ಕೂ ದೂರು ನೀಡಿದ್ದೇವೆ ಎಂದು ಖಡಕ್​ ಸೂಚನೆ ನೀಡಿದ್ದರು.


ಇದರಿಂದ ರೊಚ್ಚಿಗೆದ್ದ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ನಾಯಕರ ವಿರುದ್ಧವೇ ತಿರುಗಿ ಬಿದ್ದಿದ್ದು,ಇಂದು  ಬಹಿರಂಗವಾಗಿಯೇ ಬಾವುಟ ಹಿಡಿದು ಸುಮಾಲತಾ ಪರ ಪ್ರಚಾರ ನಡೆಸಲು ಮುಂದಾಗಿದ್ದಾರೆ. ಅಲ್ಲದೇ ನಮ್ಮ ವಿರುದ್ಧ ಕ್ರಮಕ್ಕೆ ಮುಂದಾದರೆ ಪಕ್ಷ ತೊರೆಯುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಇದು ಕಾಂಗ್ರೆಸ್​ ಪಕ್ಷದ ನಾಯಕರು ಹಾಗೂ ಹೈಕಮಾಂಡ್ ​ಗೂ ತಲೆನೋವಾಗಿ ಪರಿಣಮಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

PM Modi: ಪಾಕಿಸ್ತಾನಕ್ಕೆ ಸಿಂಧೂ ನದಿಯ ಹನಿ ನೀರೂ ಸಿಗಲ್ಲ: ಖಡಕ್ ಸಂದೇಶ ಕೊಟ್ಟ ಪ್ರಧಾನಿ ಮೋದಿ

Rahul Gandhi: ದೇಶದ್ರೋಹಿ ಜ್ಯೋತಿ ಮಲ್ಹೋತ್ರಾ ಜೊತೆ ರಾಹುಲ್ ಗಾಂಧಿ ಫೋಟೋ: ನಿಜವೇನು

ಕರಾವಳಿಯನ್ನೇ ಬೆಚ್ಚಿಬೀಸಿದ್ಧ ವಿಮಾನ ದುರಂತದ ಕರಾಳ ಘಟನೆಗೆ 15 ವರ್ಷ: ಜಿಲ್ಲಾಡಳಿತದಿಂದ ಗೌರವ ಸಲ್ಲಿಕೆ

ರನ್ಯಾ ರಾವ್ ಗೆ ಪರಮೇಶ್ವರ್ 25 ಲಕ್ಷ ರೂ ಕೊಟ್ಟಿದ್ದಾರೆ: ಒಪ್ಪಿಕೊಂಡ ಡಿಕೆ ಶಿವಕುಮಾರ್

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

ಮುಂದಿನ ಸುದ್ದಿ
Show comments