Publish Date: Fri, 01 Dec 2017 (09:58 IST)
Updated Date: Fri, 01 Dec 2017 (10:02 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಮ್ಯಾ ಸ್ಪರ್ಧಿಸುತ್ತಾರೆಂಬ ಸುದ್ದಿ ಹುಟ್ಟಿಕೊಂಡ ಬೆನ್ನಲ್ಲೇ ಮಂಡ್ಯದ ಮಾಜಿ ಸಂಸದೆಗಾಗಿ ರೆಬಲ್ ಸ್ಟಾರ್ ಅಂಬಿ ಮಂಡ್ಯ ಕ್ಷೇತ್ರ ಬಿಟ್ಟುಕೊಡಬೇಕಾಗಬಹುದು ಎಂಬ ಮಾತುಗಳು ಕೇಳಿ ಬಂದಿತ್ತು.
ಆದರೆ ಇದೀಗ ಇಬ್ಬರೂ ಸ್ಟಾರ್ ಗಳಿಗೂ ಕಾಂಗ್ರೆಸ್ ತುಪ್ಪ ಸವರಲು ಮುಂದಾಗಿದೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾಗಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ರಮ್ಯಾಗೆ ದೆಹಲಿ ನಾಯಕರ ಕೃಪಾಕಟಾಕ್ಷವಿದೆ.
ಇದೇ ಬಲದಿಂದ ಅವರಿಗೆ ಮಂಡ್ಯ ಟಿಕೆಟ್ ಸಿಗುತ್ತದೆ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ಹಾಗೆ ಮಾಡಿದರೆ ಮಂಡ್ಯದ ಗಂಡು ಅಂಬರೀಷ್ ಸ್ಥಾನ ಬಿಟ್ಟುಕೊಡಬೇಕಾಗುತ್ತಿತ್ತು. ಇದರಿಂದ ಅಸಮಾಧಾನ ಸ್ಪೋಟಗೊಳ್ಳುವ ಸಾಧ್ಯತೆಯಿತ್ತು. ಇದೇ ಕಾರಣಕ್ಕೆ ಅಂಬಿಗೆ ಮಂಡ್ಯ ಬಿಟ್ಟುಕೊಟ್ಟು ರಮ್ಯಾಗೆ ಬೆಂಗಳೂರಿನ ಬಸವನಗುಡಿ ವಿಧಾನಸಭೆ ಕ್ಷೇತ್ರದ ಟಿಕೆಟ್ ನೀಡಬಹುದು ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಪ್ರಕಟಣೆ ಹೊರ ಬಂದಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ