Webdunia - Bharat's app for daily news and videos

Install App

ಮಂಡ್ಯ ಗೌಡ್ತಿ ಬಿರುದು ಸುಮಲತಾ ಅಂಬರೀಶ್ ಗೆ ಕೊಟ್ಟಿದ್ಯಾರು?

Webdunia
ಗುರುವಾರ, 7 ಮಾರ್ಚ್ 2019 (16:28 IST)
ಮಂಡ್ಯದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಸ್ಪರ್ಧಿಸೋದು ಖಚಿತವಾಗಿದೆ. ಇನ್ನು  ಕಾಂಗ್ರೆಸ್ ಟಿಕೆಟ್ ನಿರಾಕರಣೆ ಬೆನ್ನಲ್ಲೇ ಪಕ್ಷೇತರವಾಗಿ ಸ್ಪರ್ಧಿಸೋ ನಿಟ್ಟಿನಲ್ಲಿ ಸುಮಲತಾ ಮತ್ತಷ್ಟು ಆಕ್ಟೀವ್ ಆಗಿದ್ದು, ಏಕಾಂಗಿಯಾಗಿಯೇ ಕ್ಷೇತ್ರ ಪರ್ಯಟನೆ ಕೈಗೊಂಡಿದ್ದಾರೆ.

ಸುಮಲತಾ ಅಂಬರೀಶ್ ಇಂದು ಕೂಡ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಿಂಚಿನ ಸಂಚಾರ ಮಾಡಿದರು. ಚುನಾವಣೆ ಘೋಷಣೆಗೂ ಮುನ್ನವೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

ಮಂಡ್ಯ ಲೋಕಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದೆ. ನಿನ್ನೆಯಷ್ಟೇ ಕೈ ಪಡೆ ಸುಮಲತಾಗೆ ಮಂಡ್ಯ ಕ್ಷೇತ್ರದ ಟಿಕೆಟ್ ನಿರಾಕರಣೆ ಮಾಡಿತ್ತು. ಕೈ ಟಿಕೆಟ್ ನಿರಾಕರಣೆ ನಡುವೆಯೇ ಫುಲ್ ಆಕ್ಟೀವ್ ಆಗಿರುವ ಸುಮಲತಾ ಕ್ಷೇತ್ರ ಪರ್ಯಟನೆ ಮುಂದುವರಿಸಿದ್ದು, ಹೋದಲ್ಲೆಲ್ಲ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ. 

ಮಂಡ್ಯದ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಾದ್ಯಂತ ಸುಮಲತಾ ಅಂಬರೀಷ್  ಮಿಂಚಿನ ಸಂಚಾರ ಮಾಡಿದ್ರು.  ದಾರಿಯುದ್ದಕ್ಕೂ ಸುಮಲತಾಗೆ ಅಭೂತಪೂರ್ವ ಸ್ವಾಗತ ಕೋರಲಾಯ್ತು. ಎತ್ತಿನಗಾಡಿ, ತೆರೆದ ವಾಹನಗಳಲ್ಲಿ ಕೆಲವೊಂದು ಗ್ರಾಮಗಳಲ್ಲಿ ಮೆರವಣಿಗೆ ಕೂಡ ನಡೆಸಲಾಯ್ತು. ಇನ್ನು ಆಯಾ ಗ್ರಾಮಗಳ ಮಹಿಳೆಯರು, ಸುಮಲತಾಗೆ ತುಂಬಿದ ಕೊಡ, ಕಳಸಗಳೊಂದಿಗೆ ಪೂರ್ಣ ಕುಂಭ ಸ್ವಾಗತ ಕೋರಿದ್ರು. ಇದೇ ವೇಳೆ ಅಭಿಮಾನಿಗಳು ಮಂಡ್ಯ ಗೌಡ್ತಿಗೆ ಜೈ ಅನ್ನೋ ಮೂಲಕ ಸುಮಲತಾಗೆ ಮಂಡ್ಯ ಗೌಡ್ತಿ ಬಿರುದು ನೀಡಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments