Webdunia - Bharat's app for daily news and videos

Install App

ಮಂಡ್ಯ ಲೋಕಸಭೆ ಉಪಚುನಾವಣೆ: ನಿಲ್ಲದ ವಾಕ್ಸಮರ

Webdunia
ಗುರುವಾರ, 11 ಅಕ್ಟೋಬರ್ 2018 (18:17 IST)
ಮಾಜಿ ಸಚಿವ ಚಲುವರಾಯಸ್ವಾಮಿಯನ್ನು ಡೆಡ್ ಹಾರ್ಸ್ ಎಂದು ಸಚಿವ ಪುಟ್ಟರಾಜು ಜರೆದಿದ್ರು. ಇದಕ್ಕೆ ಪ್ರತಿಯಾಗಿ ಚಲುವರಾಯಸ್ವಾಮಿ ಬೆಂಬಲಿಗರು ಪುಟ್ಟರಾಜು ವಿರುದ್ಧ ಹರಿಹಾಯ್ದಿದ್ದರು. ಅದಾದ ಬಳಿಕ ಹಾಲಿ, ಮಾಜಿ ಸಚಿವರ ವಕ್ಸಮರ ಮತ್ತೆ ಮುಂದುವರಿದಿದೆ.

ಚಲುವರಾಯಸ್ವಾಮಿ ಬೆಂಬಲಿಗರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಪುಟ್ಟರಾಜು, ಚಲುವರಾಯಸ್ವಾಮಿಯನ್ನು ಚರ್ಚೆಗೆ ಆಹ್ವಾನಿಸಿದ್ದು, ಸವಾಲು ಸ್ವೀಕರಿಸಿ ಚರ್ಚೆ ಮಾಡುವಂತೆ ಹೇಳಿದ್ದಾರೆ.

ಮಂಡ್ಯದಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದು, ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲಿ ಗೆದ್ದವನು ಸೋತ, ಸೋತವನು ಸತ್ತ ಅನ್ನುವ ರೀತಿ ನಾವೇಲ್ಲ ರಾಜಕಾರಣ ಮಾಡಬೇಕಾಗಿದೆ. ಆ ಅರ್ಥದಲ್ಲಿ ಡೆಡ್ ಹಾರ್ಸ್ ಪದ ಬಳಸಿದೆ ಅಷ್ಟೇ. ಜನ 52 ಸಾವಿರ ಮತಗಳ ಅಂತರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನ ಆಯ್ಕೆ ಮಾಡಿ ನೀನು ಸುಮ್ಮನಿರಪ್ಪ ಅಂತ ಹೇಳಿದ್ದಾರೆ.

ಹೀಗಾಗಿ ನಾನು ಆ ರೀತಿ ಹೇಳಿಕೆ ನೀಡಿದೆ ಅಷ್ಟೇ. ಅವರಿಗೆ ಅಗೌರವ ತರುವ ಉದ್ದೇಶದಿಂದ ಹಾಗೆ ಹೇಳಿಲ್ಲ.  ಚಲುವರಾಯಸ್ವಾಮಿ ಅವ್ರನ್ನ ಜಿ.ಪಂ ಉಪಾಧ್ಯಕ್ಷನನ್ನಾಗಿ ಮಾಡಿ ರಾಜಕೀಯ ಶಕ್ತಿ ತುಂಬುತ್ತ ಬಂದವ್ರು ಯಾರು ಅನ್ನೋದರ ಬಗ್ಗೆ ಮಂಡ್ಯದಲ್ಲಿ ದೊಡ್ಡ ವೇದಿಕೆ ಹಾಕಿ ಬಹಿರಂಗ ಚರ್ಚೆ ಮಾಡಬೇಕು. ಅದಕ್ಕೆ ನಾನು ರೆಡಿ ಎಂದರು.
ನಾನು ಯಾವುದೋ ಕಾಟ್ಪೋಟಿಗಳಿಗೆ ಉತ್ತರ ಕೊಡುವ ಅಗತ್ಯ ಇಲ್ಲ. ಎಂದು ಚಲುವರಾಯಸ್ವಾಮಿ ಬೆಂಬಲಿಗರನ್ನು ಕಾಟ್‌ಪೋಟಿಗಳು ಎಂದು ಜರಿದರು.
ಜಿಪಂ ಹಾಲ್ ನಲ್ಲಿ ಯಾರು ಕಾಲು ಹಿಡಿದುಕೊಂಡ್ರು ಅಂತ ಮಾಜಿ ಶಾಸಕ ಹೆಚ್‌.ಬಿ. ರಾಮು ಅವ್ರೆ ಸಾಕ್ಷಿ, ಬೇಕಿದ್ರೆ ಅವ್ರ ನೇತೃತ್ವದಲ್ಲಿ ಚರ್ಚೆ ನಡೆಯಲಿ ಎಂದರು.
ಚಲುವರಾಯಸ್ವಾಮಿ ಬರುವುದಾದರೆ ಬಹಿರಂಗ ಚರ್ಚೆಗೆ ನಾನು ಸಿದ್ಧ ಎಂದ ಅವರು, ನಾನು ಚಲುವರಾಯಸ್ವಾಮಿ ಸ್ನೇಹಿತರು. ರಾಜಕೀಯ ವಿಚಾರದಲ್ಲಿ ಅವ್ರು ನನಗೆ ಏನ್ ತೊಂದ್ರೆ ಕೊಟ್ರು, ನಾನು ಅವ್ರ ಬಗ್ಗೆ ಏನ್ ಮಾತನಾಡಿದ್ದೇನೆ ಅನ್ನೋದ್ರ ಬಗ್ಗೆ ಚರ್ಚೆಗೆ ನಾನು ರೆಡಿ ಎಂದರು.

ಯಾವನೋ ಇನ್ನೊಬ್ಬನ ಮಾತಿಗೆ ನಾನು ಉತ್ತರ ಕೊಡುವ ಅಗತ್ಯ ಇಲ್ಲ. ತಲೆಯಲ್ಲಿ ಮೆದುಳು ಇಟ್ಟಕೊಂಡು ಮಾತನಾಡಬೇಕು ಎಂಬ ಚಲುವರಾಯಸ್ವಾಮಿ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ್ದಾರೆ. ನನ್ನ ತಲೆ ತುಂಬಾ ಫೈನ್ ಆಗಿದೆ. ನನ್ನ ತಲೆಯಲ್ಲಿ ಮೆದುಳು ಇರೋದಕ್ಕೆ ಎದುರಾಳಿಯ ಅನುಕಂಪದ ಅಲೆ ಇದ್ರು ಜನ ನನ್ನನ್ನ ಗೆಲ್ಲಿಸಿದ್ದಾರೆ.
ಚಲುವರಾಯಸ್ವಾಮಿ ಅವ್ರು ತಲೆ ಸರಿ ಮಾಡಿಸಿಕೊಳ್ಳಬೇಕಾಗಿದೆ ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments