Webdunia - Bharat's app for daily news and videos

Install App

ಮಂಡ್ಯ ನಗರಸಭೆ ಅಧ್ಯಕ್ಷಸ್ಥಾನ: ಕಾಂಗ್ರೆಸ್ ತೆಕ್ಕೆಗೆ

Webdunia
ಸೋಮವಾರ, 9 ಜುಲೈ 2018 (17:54 IST)
ಮಂಡ್ಯ ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ ಅವ್ರ ಅಕಾಲಿಕ ನಿಧನದಿಂದ ತೆರವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದ್ರೆ, ತನ್ನ ಭದ್ರಕೋಟೆಯಲ್ಲೇ ಜೆಡಿಎಸ್ ಪಕ್ಷ ಹೀನಾಯವಾಗಿ ಸೋಲನ್ನಪ್ಪಿದೆ. 

ಮಂಡ್ಯ ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ ಅವ್ರ ಅಕಾಲಿಕ ನಿಧನದಿಂದ ತೆರವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದ್ರೆ, ತನ್ನ ಭದ್ರಕೋಟೆಯಲ್ಲೇ ಜೆಡಿಎಸ್ ಪಕ್ಷ ಹೀನಾಯವಾಗಿ ಸೋಲನ್ನಪ್ಪಿದೆ. 

ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಗಾದಿ ನಿರೀಕ್ಷೆಯಂತೆ ಕಾಂಗ್ರೆಸ್ ಪಕ್ಷದ ಪಾಲಾಗಿದೆ. 35 ಸದಸ್ಯರ ಬಲವುಳ್ಳ ಮಂಡ್ಯ ನಗರಸಭೆಯಲ್ಲಿ ಹಾಲಿ ಅಧ್ಯಕ್ಷ ಬೋರೇಗೌಡ ಸಾವನ್ನಪ್ಪಿದ್ದರಿಂದ ಕಾಂಗ್ರೆಸ್ ಸದಸ್ಯರ ಸಂಖ್ಯೆ 14 ಇದ್ದರೆ, ಜೆಡಿಎಸ್ 10, ಬಿಜೆಪಿ 1, ಪಕ್ಷೇತರರು 9 ಮಂದಿ ಇದ್ದರು. ಈ ಪೈಕಿ 33 ಮಂದಿ ಇಂದು ಅಧ್ಯಕ್ಷರ ಚುನಾವಣೆಯಲ್ಲಿ ಭಾಗಿಯಾಗಿದ್ರು. ಮಂಡ್ಯ ನಗರಸಭೆಯ ನೂತನ ಅಧ್ಯಕ್ಷರಾಗಿ ನಗರದ 26ನೇ ವಾರ್ಡ್​ನ ಶಹಜಾನ್ ಆಯ್ಕೆಯಾದ್ರೆ, ಜೆಡಿಎಸ್ ಅಭ್ಯರ್ಥಿ ಸುನೀತಾ ರವೀಂದ್ರ ಹೀನಾಯ ಸೋಲುಂಡ್ರು. ಶಹಜಾನ್ ಪರ 30 ಮಂದಿ ಸದಸ್ಯರು ಮತ ಹಾಕಿದ್ರೆ, ಜೆಡಿಎಸ್ ಪರ ಕೇವಲ 3 ಮಂದಿ ಸದಸ್ಯರು ಮಾತ್ರ ಮತ ಹಾಕಿದ್ರು. ವಿಪ್ ಜಾರಿ ಮಾಡಿಲ್ಲದ ಕಾರಣ 10 ಮಂದಿ ಜೆಡಿಎಸ್ ಸದಸ್ಯರಿದ್ದರೂ ಆ ಪೈಕಿ ಜೆಡಿಎಸ್ ನ ಸುನೀತಾಗೆ ಬಿದ್ದಿದ್ದು ಕೇವಲ 3 ಮತಗಳು.

ಮಂಡ್ಯ ಜಿಲ್ಲೆಯು ಜೆಡಿಎಸ್ ನ ಭದ್ರಕೋಟೆಯಾಗಿದ್ದು, ಮಂಡ್ಯ ಕ್ಷೇತ್ರದ ಹಾಲಿ ಶಾಸಕರು ಜೆಡಿಎಸ್ ನವ್ರೇ ಇದ್ದರು. ಜೆಡಿಎಸ್ ಮನಸ್ಸು ಮಾಡಿದ್ರೆ ಅಧಿಕಾರವನ್ನು ಸುಲಭವಾಗಿ ಹಿಡಿಯಬಹುದಿತ್ತು. ಆದರೆ ಜೆಡಿಎಸ್ ಇನ್ನು ನಗರಸಭೆ ಅಧಿಕಾರಾವಧಿ ಕೇವಲ 63 ದಿನ ಮಾತ್ರ ಇರೋದ್ರಿಂದ ತಲೆ ಕೆಡಿಸಿಕೊಳ್ಳಲಿಲ್ಲ. ಜೊತೆಗೆ ಸದಸ್ಯರಿಗೆ ವಿಪ್ ಕೂಡ ಜಾರಿ ಮಾಡಿರಲಿಲ್ಲ. ಈ ನಿಟ್ಟಿನಲ್ಲಿ ಕೆಲ ಜೆಡಿಎಸ್ ಸದಸ್ಯರು ಕಾಂಗ್ರೆಸ್ ಗೆ ಬೆಂಬಲ ಕೊಟ್ರು. ಹಾಗಾಗಿ ಕಾಂಗ್ರೆಸ್ ಪಕ್ಷ ಜಯಭೇರಿ ಭಾರಿಸಿದ್ರೆ, ಜೆಡಿಎಸ್ ಹೀನಾಯವಾಗಿ ಸೋಲನ್ನಪ್ಪಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

ಮುಂದಿನ ಸುದ್ದಿ
Show comments