Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ಬಿಎಸ್‌ವೈ ವಿರುದ್ಧ ಆಕ್ರೋಶ

ಮಂಡ್ಯದಲ್ಲಿ ಬಿಎಸ್‌ವೈ ವಿರುದ್ಧ ಆಕ್ರೋಶ
ಬೆಂಗಳೂರು , ಗುರುವಾರ, 15 ಜೂನ್ 2017 (13:24 IST)
ಜನತೆಯ ಮನವಿಯನ್ನು ಆಲಿಸಲು ನಿರಾಕರಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
 
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇಶಾವರಿ ಕೆರೆ ಗ್ರಾಮಕ್ಕೆ ಯಡಿಯೂರಪ್ಪ ಆಗಮಿಸಿದಾಗ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಅರ್ಜಿ ಸಲ್ಲಿಸಲು ಹೋದಾಗ ಬಿಎಸ್‌ವೈ ಅದನ್ನು ನಿರ್ಲಕ್ಷಿಸಿ ತೆರಳಿರುವುದು ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.
 
ಗ್ರಾಮಗಳಿಗೆ ತೆರಳಿ ಜನತೆಯ ಸಂಕಷ್ಟಗಳನ್ನು ಆಲಿಸಿ ಪರಿಹಾರ ದೊರಕಿಸಿಕೊಡುವುದಾಗಿ ಹೇಳಿ ಪ್ರವಾಸ ಹೊರಟಿದ್ದ ಯಡಿಯೂರಪ್ಪ, ಜನತೆಯ ಮನವಿಯನ್ನು ಆಲಿಸದೆ ಹೋಗಿದ್ದರಿಂದ ಅವರ ವಿರುದ್ಧ ಧಿಕ್ಕಾರ ಮೊಳಗಿಸಲಾಗಿದೆ ಸಂಘಟನೆಯ ಕಾರ್ಯಕರ್ತರು ತಿಳಿಸಿದ್ದಾರೆ.
 
ಯಡಿಯೂರಪ್ಪ ಅರ್ಜಿ ಸ್ವೀಕರಿಸದೆ ತೆರಳಿರುವುದು ಗ್ರಾಮಸ್ಥರಲ್ಲಿ ತುಂಬಾ ಆಕ್ರೋಶ ಉಂಟು ಮಾಡಿದ್ದು ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಊಟದಲ್ಲಿ ಈರುಳ್ಳಿ ಬಳಸಿದ್ದಕ್ಕೆ ಅಮೆರಿಕದಲ್ಲಿ ಭಾತೀಯನೊಬ್ಬ ಮಾಡಿದ್ದೇನು ಗೊತ್ತಾ..?