Select Your Language

Notifications

webdunia
webdunia
webdunia
webdunia

‘ಅಧಿಕಾರಿಗೆ ದಿಗ್ಭಂಧನ ಹಾಕಿದ ಮಂಡ್ಯ ಜನರು’

‘ಅಧಿಕಾರಿಗೆ ದಿಗ್ಭಂಧನ ಹಾಕಿದ ಮಂಡ್ಯ ಜನರು’
ಮಂಡ್ಯ , ಬುಧವಾರ, 10 ಜುಲೈ 2019 (14:44 IST)
ಅಧಿಕಾರಿಗೆ ದಿಗ್ಭಂಧನ ಹಾಕಿ ಧಿಕ್ಕಾರ ಕೂಗಿದ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮಂಡ್ಯ ಬೂಕನಕೆರೆ ಐಚನಹಳ್ಳಿ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ ಐಚನಹಳ್ಳಿ ಗ್ರಾಮದ ಜನರು.

ಕುಡಿಯುವ ನೀರು ಸರಬರಾಜು ಮಾಡಲು ವಿಫಲರಾಗಿರುವ ಅಧ್ಯಕ್ಷ ಮತ್ತು ಪಿಡಿಓ ಅವರನ್ನು ನೂರಾರು ಮಹಿಳೆಯರು ತರಾಟೆಗೆ ತೆಗೆದುಕೊಂಡ್ರು.

ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಮಹಿಳೆಯರು ಮುತ್ತಿಗೆ ಹಾಕಿದ್ರು. ಪಂಚಾಯಿತಿ ಅಧಿಕಾರಿಗಳು ಬೇಜವಾಬ್ದಾರಿತನವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಕಳಪೆ ಕಾಮಗಾರಿಯನ್ನು ನಡೆಸಿ ಸರ್ಕಾರದ ಹಣವನ್ನು ಲೂಟಿಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಂಡು ಅಕ್ರಮವೆಸಗಿರುವ ಪಿಡಿಓ ರಮೇಶಮೂರ್ತಿ ಅವರನ್ನು ಸೇವೆಯಿಂದ ಅಮಾನತ್ತು ಮಾಡಬೇಕೆಂದು ಆಗ್ರಹ ಮಾಡಿದ್ರು.

ಇನ್ನು ಪ್ರತಿಭಟನಾ ಸ್ಥಳಕ್ಕಾಗಮಿಸಿದ ತಾಲೂಕು ಪಂಚಾಯಿತಿ ಇಓ ಚಂದ್ರಮೌಳಿ ಅವರಿಗೆ ದಿಗ್ಬಂಧನ ವಿಧಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರಸ್ವಾಮಿ ರಾಜೀನಾಮೆ ನೀಡ್ಲೇಬೇಕೆಂದ ಬಿಜೆಪಿ