Mandya Accident: ಸಂಚಾರಿ ಪೊಲೀಸರ ಯಡವಟ್ಟಿನಿಂದ ಮಂಡ್ಯದಲ್ಲಿ ಮೂರು ವರ್ಷದ ಬಾಲಕಿ ಸಾವು

Krishnaveni K
ಸೋಮವಾರ, 26 ಮೇ 2025 (14:19 IST)
Photo credit: Social media
ಮಂಡ್ಯ: ಹೆಲ್ಮೆಟ್ ತಪಾಸಣೆಗಾಗಿ ಬೈಕ್ ನಿಲ್ಲಿಸಲು ಸಂಚಾರಿ ಪೊಲೀಸರು ಸೂಚನೆ ನೀಡಿದ್ದರಿಂದ ಸಮತೋಲನ ತಪ್ಪಿ ಬಿದ್ದ ಮೂರು ವರ್ಷದ ಮಗು ಸಾವನ್ನಪ್ಪಿದ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಸ್ವರ್ಣಸಂದ್ರ ಬಳಿ ಸಂಚಾರಿ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ತಮ್ಮ ಮೂರು ವರ್ಷದ ಮಗು ಹೃತೀಕ್ಷಾಳನ್ನು ಅಶೋಕ್ ಮತ್ತು ವಾಣಿ ದಂಪತಿ ಬೈಕ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು.

ಮಗುವಿಗೆ ನಾಯಿ ಕಚ್ಚಿದ್ದರಿಂದ ತಮ್ಮದೇ ದುಗುಡದಲ್ಲಿದ್ದ ದಂಪತಿ ಪೊಲೀಸರು ತಡೆದಿದ್ದರಿಂದ ಗಲಿಬಿಲಿಯಾದರು. ಈ ವೇಳೆ ಬೈಕ್ ಸಮತೋಲನ ಕಳೆದುಕೊಂಡು ಬಿದ್ದಿದೆ. ತನ್ನ ಪೋಷಕರ ಮಡಿಲಿನಲ್ಲಿ ಕುಳಿತಿದ್ದ ಮಗು ಕೂಡಾ ಆಯತಪ್ಪಿ ಬಿದ್ದಿದ್ದು ತಲೆಗೆ ತೀವ್ರ ಪೆಟ್ಟಾಗಿದೆ.

ಪರಿಣಾಮ ತೀವ್ರ ರಕ್ತಸ್ರಾವವಾಗಿದ್ದು, ಮಗು ತಾಯಿಯ ಮಡಿಲಿನಲ್ಲಿಯೇ ಪ್ರಾಣ ಬಿಟ್ಟಿದೆ. ಮಗುವನ್ನು ಕಳೆದುಕೊಂಡು ರಸ್ತೆಯಲ್ಲೇ ಕುಳಿತು ಪೋಷಕರು ಗೋಳಾಡುತ್ತಿದ್ದರೆ ಅಲ್ಲಿ ಸೇರಿದ್ದ ಜನ ಪೊಲೀಸರಿಗೆ ಹಿಡಿಶಾಪ ಹಾಕಿದ್ದಾರೆ.

ಇನ್ನು ಘಟನೆ ಬಳಿಕ ಜನ ರೊಚ್ಚಿಗದ್ದಿದ್ದರು. ಹೀಗಾಗಿ ಸ್ಥಳಕ್ಕೆ ಸ್ಥಳೀಯ ಶಾಸಕ ರವಿ ಗಣಿಗ ಬಂದು ಸಾಂತ್ವನ ಹೇಳಿದರು. ಅಲ್ಲದೇ ಮೃತ ಪೋಷಕರಿಗೆ ಸರ್ಕಾರದ ಕಡೆಯಿಂದ ಮತ್ತು ತಮ್ಮ ಕಡೆಯಿಂದ ವೈಯಕ್ತಿಕವಾಗಿ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments