Publish Date: Thu, 09 Feb 2023 (16:18 IST)
Updated Date: Thu, 09 Feb 2023 (16:20 IST)
ಅಂಗವಿಕಲನ ಮೇಲೆ ಮಂಗಳಮುಖಿಯರು ಹಲ್ಲೆ ಮಾಡಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಮಂಗಳಮುಖಿಯರು ವೆಂಕಟೇಶ ಎಂಬಾತನ ಮೇಲೆ ಹಲ್ಲೆ ಮಾಡಿದ್ಧಾರೆ ಎನ್ನಲಾಗಿದೆ. ತಾಯಿಯ ಜೊತೆ ನಡೆದುಕೊಂಡು ಹೋಗ್ತಿದ್ದ ವೆಂಕಟೇಶ್ ಎಂಬ ಅಂಗವಿಕಲನ ಮೇಲೆ ಇಬ್ಬರು ಮಂಗಳಮುಖಿಯರು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಇಂದಿರಾನಗರ ಠಾಣೆಗೆ ವೆಂಕಟೇಶ್ ದೂರು ನೀಡಿದ್ದು, ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.