Webdunia - Bharat's app for daily news and videos

Install App

ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದವನನ್ನ ಕರೆದೊಯ್ದ ಬೆತ್ತಲುಗೊಳಿಸಿದ ಮಂಗಳಮುಖಿಯರು

Webdunia
ಬುಧವಾರ, 4 ಜನವರಿ 2023 (19:06 IST)
ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದವನನ್ನ ಕರೆದೊಯ್ದ ಬೆತ್ತಲುಗೊಳಿಸಿದ ಮಂಗಳಮುಖಿಯರು ಬೆದರಿಸಿ 4.30 ಲಕ್ಷ ದೋಚಿ ಪರಾರಿಯಾಗಿರುವ ಘಟನೆ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 
ಆಂಧ್ರಪ್ರದೇಶದ ಪ್ರಕಾಶಂ ಮೂಲದ ಶೇಖ್ ಶ್ರೀನಿವಾಸನ್ (49) ಹಣ ಕಳೆದುಕೊಂಡವರು. ಡಿಸೆಂಬರ್ 31ರಂದು ಬೆಳಗ್ಗಿನ ಜಾವ 1 ರಿಂದ 4:30ರ ನಡುವೆ ರೆಸಿಡೆನ್ಸಿ ರಸ್ತೆಯ ಖಾಸಗಿ ಹೋಟೆಲಿನಲ್ಲಿ ಘಟನೆ ನಡೆದಿದ್ದು, ಅಶೋಕ ನಗರ ಠಾಣೆಗೆ ಶ್ರೀನಿವಾಸನ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ.
 
ಡಿಸೆಂಬರ್ 30ರಂದು ಮೆಹಂದಿ ಪಬ್ ಗೆ ತೆರಳಿದ್ದ ಶ್ರೀನಿವಾಸನ್ ಬಳಿಕ ಊಟ ಮುಗಿಸಿ ನಡೆದುಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ಪರ್ಲ್ ಅಕಾಡೆಮಿ ಬಳಿ ಆಟೋದಲ್ಲಿ ಬಂದ ಇಬ್ಬರು ಮಂಗಳ ಮುಖಿಯರು ಕೈಸನ್ನೆ ಮಾಡಿ ಶ್ರೀನಿವಾಸನ್ ರನ್ನ ತಮ್ಮ ಆಟೋದಲ್ಲಿ ಹತ್ತಿಸಿಕೊಂಡಿದ್ದಾರೆ. ಬಳಿಕ ಆಟೋದಲ್ಲಿ ಸುತ್ತಾಡಿಸಿ ಡಿಸೆಂಬರ್ 31ರ ಬೆಳಗ್ಗಿನ ಜಾವ ರೆಸಿಡೆನ್ಸಿ ರಸ್ತೆಯ ಖಾಸಗಿ ಹೋಟೆಲಿಗೆ ಕರೆತಂದಿದ್ದಾರೆ. ನಂತರ ಮತ್ತಿಬ್ಬರು ಮಂಗಳಮುಖಿಯರನ್ನ ಹೋಟೆಲಿಗೆ ಕರೆಸಿಕೊಂಡಿದ್ದಾರೆ. ಬಳಿಕ ಶ್ರೀನಿವಾಸನ್ ರನ್ನ ಬೆತ್ತಲುಗೊಳಿಸಿ ವೀಡಿಯೋ ಚಿತ್ರೀಕರಿಸಿಕೊಂಡು ವಾಚ್, ಉಂಗುರ, ಡೆಬಿಟ್ ಕಾರ್ಡ್, ಚಿನ್ನದ ಚೈನು, 40 ಸಾವಿರ ರೂ‌ನಗದು ಕಸಿದುಕೊಂಡಿದ್ದಾರೆ. ನಂತರ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಗೂಗಲ್ ಪೇ ಮೂಲಕ 1 ಲಕ್ಷ ಹಾಗೂ ಡೆಬಿಟ್ ಕಾರ್ಡ್ ಪಿನ್ ಪಡೆದು 2.90 ಲಕ್ಷ ವಿತ್ ಡ್ರಾ ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ‌ ಉಲ್ಲೇಖಿಸಲಾಗಿದೆ.
 
ಹೋಟೆಲ್ ಸಿಬ್ಬಂದಿಯ ಸಹಾಯದಿಂದ ಶ್ರೀನಿವಾಸನ್ ಅಶೋಕನಗರ ಠಾಣೆಗೆ ತೆರಳಿ ದೂರು ನೀಡಿದ್ದು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments