Webdunia - Bharat's app for daily news and videos

Install App

ಮಂಗಳೂರು ವಿಮಾನ ದುರಂತಕ್ಕೆ ಇಂದಿಗೆ 9 ವರ್ಷ

Webdunia
ಬುಧವಾರ, 22 ಮೇ 2019 (13:42 IST)
ಮಂಗಳೂರು ವಿಮಾನ ನಿಲ್ದಾಣ ಎಂದ ತಕ್ಷಣ ಆ ಕರಾಳ ದಿನದ ಕಹಿ  ಘಟನೆ ನೆನಪು ಆಗುತ್ತದೆ. ಮಂಗಳೂರು ಮಹಾ ವಿಮಾನ ದುರಂತ ನಡೆದು ಇಂದಿಗೆ 9 ವರ್ಷಗಳು ಕಳೆದಿವೆ. ಈ ದುರಂತದಲ್ಲಿ  158 ಮಂದಿ ಸಾವನ್ನಪಿದ್ದರು.

ಮಂಗಳೂರು ವಿಮಾನ ನಿಲ್ದಾಣದಲ್ಲಿ 2010 ರ ಮೇ 22 ರಂದು ಮುಂಜಾನೆಯ ಸಮಯ. ಒಂದೆಡೆ ಜಿಟಿ ಜಿಟಿ ಮಳೆ.

ಮಬ್ಬುಗತ್ತಲ ನಸುಕಿನಲ್ಲಿ ಆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ  ಮಂದಿ ಗಾಢ  ನಿದ್ರೆಗೆ ಜಾರಿದ ಸಮಯ. ಕೆಲವರು ಇನ್ನೇನು ತಮ್ಮ ಊರು ತಲುಪಿತು ಎಂದು ಇಳಿಯುವ ತವಕದಲ್ಲಿದ್ದರು. ಅಷ್ಟರಲ್ಲಿ ಆ ದುರಂತ ಸಂಭವಿಸಿ  ಹೋಗಿತ್ತು. ನೋಡು ನೋಡುತ್ತಲೇ  158 ಮಂದಿ ಸುಟ್ಟು ಕಾರಕಲಾಗಿದ್ದರು.

ದುಬೈ ಯಿಂದ ಆಗಮಿಸಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ IX812 ತನ್ನ ಅವಶೇಷ  ಉಳಿಸಿಕೊಳ್ಳದೆ  ಬಜ್ಪೆ ಕೆಂಜಾರಿನ  ಕಣಿವೆಯಲ್ಲಿ ಸುಟ್ಟು ಕರಕಲಾಗಿತ್ತು. ಬೆಳಕು ಹರಿಯುತಿದ್ದಂತೆಯೇ ಮಂಗಳೂರುನಲ್ಲಿ ಶೋಕದ  ಛಾಯೆ  ಆವರಿಸಿತ್ತು. ನಿದ್ದೆಯ ಮಂಪರಿನಲ್ಲಿದ್ದ  158 ಮಂದಿ ಇಹಲೋಕ ತ್ಯಜಿಸಿದ್ದರು.

ವಿಮಾನದಲ್ಲಿ ಒಟ್ಟು 166 ಮಂದಿ ಪ್ರಯಾಣಿಕರಿದ್ದು  8 ಮಂದಿ ಬದುಕಿ  ಉಳಿದಿದ್ದರು. ಇಂದಿಗೆ ಈ ಘಟನೆ ನಡೆದು 9 ವರ್ಷಗಳಾಗಿವೆ. ಆ ದಿನದ ಕರಾಳ ಛಾಯೆ ಮಾತ್ರ ಇನ್ನು ಹಾಗೆ ಉಳಿದಿದೆ. ಜಿಲ್ಲಾಡಳಿತದ  ವತಿಯಿಂದ ವಿಮಾನ ದುರಂತದಲ್ಲಿ ಸಾವನ್ನಪಿದ್ದವರಿಗೆ  ಶ್ರದ್ಧಂಜಲಿ ಸಲ್ಲಿಸುವ ಕಾರ್ಯಕ್ರಮ ನಡೆಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam: ಪಾಕಿಸ್ತಾನಕ್ಕೆ ಹನಿ ನೀರೂ ಹೋಗದಂತೆ ಭಾರತ ಮಾಡಿಕೊಂಡ ಉಪಾಯಗೇಳನು

Indian Army: ಮತ್ತೆ ಗಡಿಯಲ್ಲಿ ಪಾಕಿಸ್ತಾನ ಕ್ಯಾತೆ: ಗುಂಡಿನ ದಾಳಿಗೆ ಭಾರತೀಯರಿಂದಲೂ ಗುಂಡೇ ಉತ್ತರ

Karnataka Weather: ರಾಜ್ಯದಲ್ಲಿ ಇಂದು ಈ ಎಲ್ಲಾ ಜಿಲ್ಲೆಗಳಿಗೆ ಭಾರೀ ಮಳೆ

Pehalgam: ಕಾಶ್ಮೀರ ಪ್ರವಾಸ ಕ್ಯಾನ್ಸಲ್ ಮಾಡ್ತಿರುವ ಜನ: ರೊಚ್ಚಿಗೆದ್ದ ಕಾಶ್ಮೀರಿಗರು

PM Modi: ರಾಹುಲ್ ಗಾಂಧಿ ಬಂದಾಯ್ತು, ಪ್ರಧಾನಿ ಮೋದಿ ಯಾಕೆ ಇನ್ನೂ ಪಹಲ್ಗಾಮ್ ಸಂತ್ರಸ್ತರ ಭೇಟಿಯಾಗಿಲ್ಲ

ಮುಂದಿನ ಸುದ್ದಿ
Show comments