Webdunia - Bharat's app for daily news and videos

Install App

ರಾಜ್ಯದ ಬಂದರು, ವಿಮಾನನಿಲ್ದಾಣ ಖಾಸಗೀಕರಣಕ್ಕೆ ಕೇಂದ್ರ ಯತ್ನ: ಆರೋಪ

Webdunia
ಶನಿವಾರ, 29 ಡಿಸೆಂಬರ್ 2018 (20:06 IST)
ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂದರನ್ನು  ಖಾಸಗೀಕರಣ  ಗೊಳಿಸಲು ಮುಂದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎ. ಸಿ. ವಿನಯರಾಜ್ ಆರೋಪಿಸಿದ್ದಾರೆ.

ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ವಿನಯರಾಜ್, ಬಿಜೆಪಿಯವರು ಚುನಾವಣೆ ಸಮೀಪಿಸುತ್ತಿದಂತೆಯೇ ಕರಾವಳಿ ಭಾಗಕ್ಕೆ  ಹಲವು ಕೊಡುಗೆ ನೀಡಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಎಣ್ಣೆ ಹೊಳೆಯಿಂದ ಬಿ.ಸಿ.ರೋಡ್ ವರೆಗಿನ ಚತುಷ್ಪಥ  ರಸ್ತೆ ಕಾಮಗಾರಿ  ಅರ್ಧದಲ್ಲಿಯೇ ಸ್ಥಗಿತಗೊಂಡಿದೆ. ಕಿದು ಗ್ರಾಮದ ತೆಂಗು ಅಭಿವೃದ್ಧಿ  ಸಂಶೋಧನಾ  ಕೇಂದ್ರವನ್ನು ಹೈದರಾಬಾದ್  ಗೆ ಸ್ಥಳಾಂತರಿಸಲು  ಕೇಂದ್ರ ಸರಕಾರ ಪ್ರಕ್ರಿಯೆ ಆರಂಭಿಸಿದೆ. ಪಂಪ್ ವೆಲ್ ಹಾಗೂ ಮೇಲ್ಸುತುವೆ  ಕಾಮಗಾರಿ ಕೂಡಾ ಆಮೆಗತಿಯಲ್ಲಿ ಸಾಗಿದೆ. ಇದಕ್ಕೆ ಸಂಸದರು ಸೇರಿದಂತೆ ಬಿಜೆಪಿ ನಾಯಕರು ಯಾರೂ ಮಾತನಾಡುತ್ತಿಲ್ಲ. ಈ ಬಗ್ಗೆ ಬಿಜೆಪಿಯವರು   ಶ್ವೇತ ಪತ್ರ ಹೊರಡಿಸಲಿ  ಎಂದು ಒತ್ತಾಯಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿ, ಕೇಂದ್ರ ಸರಕಾರ ಈಗಾಗಲೇ ನವ ಮಂಗಳೂರು ಬಂದರನ್ನು ಖಾಸಗೀಕರಣ ಮಾಡಲು ಮುಂದಾಗಿದೆ. 14 ಬರ್ಥ್ ನಿರ್ವಹಣೆ ಖಾಸಗಿ ಅವರಿಗೆ ನೀಡಲಾಗಿದೆ ಎಂದು ಹೇಳಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments