ಮಂಗಳೂರು-ಬೆಂಗಳೂರು ರೈಲು ಸಂಚಾರ ಸಂಪೂರ್ಣ ಸ್ಥಗಿತ

Krishnaveni K
ಶನಿವಾರ, 27 ಜುಲೈ 2024 (15:12 IST)
ಬೆಂಗಳೂರು: ಎಡಕುಮೇರಿಯಲ್ಲಿ ಗುಡ್ಡ ಕುಸಿತವಾದ ಕಾರಣ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಪ್ರಯಾಣ ಸಂಪೂರ್ಣ ರದ್ದಾಗಿದೆ. ಬದಲಿ ಮಾರ್ಗದ ಸಂಚಾರವನ್ನೂ ರದ್ದು ಮಾಡಲಾಗಿದೆ.

ಕಳೆದ ವಾರ ಶಿರಾಡಿ ಘಾಟಿ ಮತ್ತು ಚಾರ್ಮಾಡಿ ಘಾಟಿಯಲ್ಲಿ ಬಸ್ ಸಂಚಾರ ಸ್ಥಗಿತವಾಗಿತ್ತು. ಇದರಿಂದ ಸಾಕಷ್ಟು ಪ್ರಯಾಣಿಕರಿಗೆ ಅನಾನುಕೂಲವಾಗಿತ್ತು. ಆದರೆ ಈಗ ರೈಲು ಮಾರ್ಗದಲ್ಲಿ ಗುಡ್ಡ ಕುಸಿತವಾಗಿ ಮಣ್ಣು ತುಂಬಿಕೊಂಡಿರುವುದರಿಂದ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.

ನಿನ್ನೆ ರಾತ್ರಿ ಘಟನೆ ಸಂಭವಿಸಿದ್ದು ಬಳಿಕ ರೈಲು ಪ್ರಯಾಣಿಕರನ್ನು ಬಸ್ ಮಾರ್ಗವಾಗಿ ಗಮ್ಯ ಸ್ಥಳಕ್ಕೆ ತಲುಪಿಸಲಾಗಿತ್ತು. ಬಳಿಕ ಇಂದು ಈ ಮಾರ್ಗವಾಗಿ ಸಂಚರಿಸಬೇಕಾದ ರೈಲುಗಳು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವುದೆಂದು ತೀರ್ಮಾನವಾಗಿತ್ತು. ಆದರೆ ಇದೀಗ ರೈಲ್ವೇ ರೈಲು ಸಂಚಾರವೇ ರದ್ದಾಗಿರುವುದಾಗಿ ಪ್ರಯಾಣಿಕರಿಗೆ ಸಂದೇಶ ರವಾನಿಸಿದೆ.

ರೈಲ್ವೇ ಸಂಚಾರ ಸ್ಥಗಿತವಾಗಿರುವುದರಿಂದ ಪ್ರಯಾಣಿಕರು ಬಸ್ ಗಳನ್ನೇ ಅವಲಂಬಿಸಬೇಕಿದೆ. ನಿನ್ನೆ ರಾತ್ರಿ ಚಾರ್ಮಾಡಿ ಘಾಟಿಯಲ್ಲೂ ಗುಡ್ಡ ಕುಸಿತವಾಗಿ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಹಲವು ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಮಳೆಯ ಅಬ್ಬರದಿಂದಾಗಿ ಬೆಂಗಳೂರಿನಿಂದ ಕರಾವಳಿ ಭಾಗಗಳಿಗೆ ಸಂಚರಿಸುವುದೇ ದುಸ್ತರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments