Webdunia - Bharat's app for daily news and videos

Install App

ಮಂಗಳೂರು-ಬೆಂಗಳೂರು ರೈಲು ಸಂಚಾರ ಸಂಪೂರ್ಣ ಸ್ಥಗಿತ

Krishnaveni K
ಶನಿವಾರ, 27 ಜುಲೈ 2024 (15:12 IST)
ಬೆಂಗಳೂರು: ಎಡಕುಮೇರಿಯಲ್ಲಿ ಗುಡ್ಡ ಕುಸಿತವಾದ ಕಾರಣ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಪ್ರಯಾಣ ಸಂಪೂರ್ಣ ರದ್ದಾಗಿದೆ. ಬದಲಿ ಮಾರ್ಗದ ಸಂಚಾರವನ್ನೂ ರದ್ದು ಮಾಡಲಾಗಿದೆ.

ಕಳೆದ ವಾರ ಶಿರಾಡಿ ಘಾಟಿ ಮತ್ತು ಚಾರ್ಮಾಡಿ ಘಾಟಿಯಲ್ಲಿ ಬಸ್ ಸಂಚಾರ ಸ್ಥಗಿತವಾಗಿತ್ತು. ಇದರಿಂದ ಸಾಕಷ್ಟು ಪ್ರಯಾಣಿಕರಿಗೆ ಅನಾನುಕೂಲವಾಗಿತ್ತು. ಆದರೆ ಈಗ ರೈಲು ಮಾರ್ಗದಲ್ಲಿ ಗುಡ್ಡ ಕುಸಿತವಾಗಿ ಮಣ್ಣು ತುಂಬಿಕೊಂಡಿರುವುದರಿಂದ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.

ನಿನ್ನೆ ರಾತ್ರಿ ಘಟನೆ ಸಂಭವಿಸಿದ್ದು ಬಳಿಕ ರೈಲು ಪ್ರಯಾಣಿಕರನ್ನು ಬಸ್ ಮಾರ್ಗವಾಗಿ ಗಮ್ಯ ಸ್ಥಳಕ್ಕೆ ತಲುಪಿಸಲಾಗಿತ್ತು. ಬಳಿಕ ಇಂದು ಈ ಮಾರ್ಗವಾಗಿ ಸಂಚರಿಸಬೇಕಾದ ರೈಲುಗಳು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವುದೆಂದು ತೀರ್ಮಾನವಾಗಿತ್ತು. ಆದರೆ ಇದೀಗ ರೈಲ್ವೇ ರೈಲು ಸಂಚಾರವೇ ರದ್ದಾಗಿರುವುದಾಗಿ ಪ್ರಯಾಣಿಕರಿಗೆ ಸಂದೇಶ ರವಾನಿಸಿದೆ.

ರೈಲ್ವೇ ಸಂಚಾರ ಸ್ಥಗಿತವಾಗಿರುವುದರಿಂದ ಪ್ರಯಾಣಿಕರು ಬಸ್ ಗಳನ್ನೇ ಅವಲಂಬಿಸಬೇಕಿದೆ. ನಿನ್ನೆ ರಾತ್ರಿ ಚಾರ್ಮಾಡಿ ಘಾಟಿಯಲ್ಲೂ ಗುಡ್ಡ ಕುಸಿತವಾಗಿ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಹಲವು ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಮಳೆಯ ಅಬ್ಬರದಿಂದಾಗಿ ಬೆಂಗಳೂರಿನಿಂದ ಕರಾವಳಿ ಭಾಗಗಳಿಗೆ ಸಂಚರಿಸುವುದೇ ದುಸ್ತರವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments