Webdunia - Bharat's app for daily news and videos

Install App

ಮಂಗಳೂರು, ಬೆಂಗಳೂರು ನಡುವೆ ರೈಲು ಪ್ರಯಾಣ ಆರಂಭಕ್ಕೆ ದಿನ ನಿಗದಿ: ವಿವರ ಇಲ್ಲಿದೆ

Krishnaveni K
ಸೋಮವಾರ, 5 ಆಗಸ್ಟ್ 2024 (10:32 IST)
ಬೆಂಗಳೂರು: ಮಂಗಳೂರು ಮತ್ತು ಬೆಂಗಳೂರು ನಡುವೆ ರೈಲು ಪ್ರಯಾಣ ಯಾವಾಗ ಆರಂಭವಾಗುತ್ತದೆ ಎಂದು ಕಾಯುತ್ತಿರುವ ಪ್ರಯಾಣಿಕರಿಗೆ ಈಗ ಸಿಹಿ ಸುದ್ದಿ ಸಿಕ್ಕಿದೆ. ಕರಾವಳಿಗೆ ಸಂಪರ್ಕ ಕಲ್ಪಿಸುವ ರೈಲು ಪ್ರಯಾಣ ಪುನರಾರಂಭವಾಗುತ್ತಿದೆ.

ಎಡಕುಮೇರಿ ಬಳಿ ಮಣ್ಣು ಕುಸಿದಿದ್ದರಿಂದ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಸುತ್ತಿದ್ದ ರೈಲು ರದ್ದಾಗಿತ್ತು. ಜುಲೈ 26 ರಿಂದ ಶಿರಾಡಿ ಘಾಟಿ ರಸ್ತೆಯಾಗಿ ರೈಲು ಸಂಚರಿಸುತ್ತಿರಲಿಲ್ಲ. ಇದರಿಂದ ಅನೇಕರಿಗೆ ತೊಂದರೆಯಾಗಿತ್ತು. ಇದೀಗ ರೈಲು ಮಾರ್ಗ ದುರಸ್ಥಿಯಾಗಿದ್ದು, ಪ್ರಯಾಣಕ್ಕೆ ಸಿದ್ಧತೆ ನಡೆದಿದೆ.

ನಿನ್ನೆಗೆ ದುರಸ್ಥಿ ಕಾರ್ಯ ಪೂರ್ಣವಾಗಿದೆ. ಇದೀಗ ಎರಡು ದಿನಗಳ ಕಾಲ ಗೂಡ್ಸ್ ರೈಲುಗಳನ್ನು ಓಡಿಸಲಾಗುತ್ತದೆ. ಇದಾದ ಬಳಿ ಪ್ಯಾಸೆಂಜರ್ ರೈಲು ನಾಳೆಯಿಂದ ಆರಂಭವಾಗಲಿದೆ. ಅಂದರೆ ಮಂಗಳವಾರದಿಂದ ಎಂದಿನಂತೆ ಪ್ಯಾಸೆಂಜರ್ ರೈಲು ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಟ ಆರಂಭಿಸಲಿದೆ.

ಮಣ್ಣು ಕುಸಿದ ಜಾಗಕ್ಕೆ ಮರಳು ಚೀಲ, ಕಾಂಕ್ರೀಟ್ ಕಾಮಗಾರಿ ಹಾಕಿ ದುರಸ್ಥಿ ಮಾಡಲಾಗಿದೆ. ಸತತವಾಗಿ ಮಳೆ ಸುರಿದಿದ್ದರಿಂದ ಶಿರಾಡಿ ಘಾಟಿ ರಸ್ತೆಯಲ್ಲೂ ಭೂಕುಸಿತವಾಗಿ ವಾಹನ ಓಡಾಟಕ್ಕೆ ತೊಂದರೆಯಾಗಿತ್ತು. ಇದೀಗ ಆ ಸಮಸ್ಯೆಯೂ ನಿವಾರಣೆಯಾಗಿದ್ದು ಎಂದಿನಂತೆ ವಾಹನ ಸಂಚಾರ ಆರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments