Webdunia - Bharat's app for daily news and videos

Install App

ಮಂಗಳೂರು, ಬೆಂಗಳೂರು ನಡುವೆ ರೈಲು ಪ್ರಯಾಣ ಆರಂಭಕ್ಕೆ ದಿನ ನಿಗದಿ: ವಿವರ ಇಲ್ಲಿದೆ

Krishnaveni K
ಸೋಮವಾರ, 5 ಆಗಸ್ಟ್ 2024 (10:32 IST)
ಬೆಂಗಳೂರು: ಮಂಗಳೂರು ಮತ್ತು ಬೆಂಗಳೂರು ನಡುವೆ ರೈಲು ಪ್ರಯಾಣ ಯಾವಾಗ ಆರಂಭವಾಗುತ್ತದೆ ಎಂದು ಕಾಯುತ್ತಿರುವ ಪ್ರಯಾಣಿಕರಿಗೆ ಈಗ ಸಿಹಿ ಸುದ್ದಿ ಸಿಕ್ಕಿದೆ. ಕರಾವಳಿಗೆ ಸಂಪರ್ಕ ಕಲ್ಪಿಸುವ ರೈಲು ಪ್ರಯಾಣ ಪುನರಾರಂಭವಾಗುತ್ತಿದೆ.

ಎಡಕುಮೇರಿ ಬಳಿ ಮಣ್ಣು ಕುಸಿದಿದ್ದರಿಂದ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಚರಸುತ್ತಿದ್ದ ರೈಲು ರದ್ದಾಗಿತ್ತು. ಜುಲೈ 26 ರಿಂದ ಶಿರಾಡಿ ಘಾಟಿ ರಸ್ತೆಯಾಗಿ ರೈಲು ಸಂಚರಿಸುತ್ತಿರಲಿಲ್ಲ. ಇದರಿಂದ ಅನೇಕರಿಗೆ ತೊಂದರೆಯಾಗಿತ್ತು. ಇದೀಗ ರೈಲು ಮಾರ್ಗ ದುರಸ್ಥಿಯಾಗಿದ್ದು, ಪ್ರಯಾಣಕ್ಕೆ ಸಿದ್ಧತೆ ನಡೆದಿದೆ.

ನಿನ್ನೆಗೆ ದುರಸ್ಥಿ ಕಾರ್ಯ ಪೂರ್ಣವಾಗಿದೆ. ಇದೀಗ ಎರಡು ದಿನಗಳ ಕಾಲ ಗೂಡ್ಸ್ ರೈಲುಗಳನ್ನು ಓಡಿಸಲಾಗುತ್ತದೆ. ಇದಾದ ಬಳಿ ಪ್ಯಾಸೆಂಜರ್ ರೈಲು ನಾಳೆಯಿಂದ ಆರಂಭವಾಗಲಿದೆ. ಅಂದರೆ ಮಂಗಳವಾರದಿಂದ ಎಂದಿನಂತೆ ಪ್ಯಾಸೆಂಜರ್ ರೈಲು ಮಂಗಳೂರು ಮತ್ತು ಬೆಂಗಳೂರು ನಡುವೆ ಓಡಾಟ ಆರಂಭಿಸಲಿದೆ.

ಮಣ್ಣು ಕುಸಿದ ಜಾಗಕ್ಕೆ ಮರಳು ಚೀಲ, ಕಾಂಕ್ರೀಟ್ ಕಾಮಗಾರಿ ಹಾಕಿ ದುರಸ್ಥಿ ಮಾಡಲಾಗಿದೆ. ಸತತವಾಗಿ ಮಳೆ ಸುರಿದಿದ್ದರಿಂದ ಶಿರಾಡಿ ಘಾಟಿ ರಸ್ತೆಯಲ್ಲೂ ಭೂಕುಸಿತವಾಗಿ ವಾಹನ ಓಡಾಟಕ್ಕೆ ತೊಂದರೆಯಾಗಿತ್ತು. ಇದೀಗ ಆ ಸಮಸ್ಯೆಯೂ ನಿವಾರಣೆಯಾಗಿದ್ದು ಎಂದಿನಂತೆ ವಾಹನ ಸಂಚಾರ ಆರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments