Publish Date: Mon, 27 Apr 2026 (17:31 IST)
Updated Date: Mon, 27 Apr 2026 (17:33 IST)
ಮಂಗಳೂರು: 2022 ರಲ್ಲಿ ನಡೆದಿದ್ದ ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಉಗ್ರ ಶಾರಿಕ್ ಗೆ ಎನ್ಐಎ ವಿಶೇಷ ಕೋರ್ಟ್ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
2022 ರ ನವಂಬರ್ 19 ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಆರೋಪಿ ಶಾರಿಕ್ ಬಾಂಬ್ ಸಾಗಿಸುತ್ತಿರುವಾಗಲೇ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ ಶಾರಿಕ್ ಮತ್ತು ಆಟೋ ಚಾಲಕನಿಗೆ ಗಾಯಗಳಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಭದ್ರತೆಗೆ ಧಕ್ಕೆ ತರಲು ಸಂಚು ರೂಪಿಸಿದ ಅಪರಾಧದ ಮೇರೆಗೆ ಉಗ್ರ ಶಾರಿಕ್ ಗೆ ಎನ್ಐಎ ಕೋರ್ಟ್ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣವನ್ನು ಎನ್ಐಎ ತಂಡ ತನಿಖೆ ನಡೆಸಿತ್ತು.
ಮಂಗಳೂರಿನ ಕದ್ರಿ ದೇವಸ್ಥಾನ ಅಥವಾ ಜನನಿಬಿಡ ಸ್ಥಳದಲ್ಲಿ ಸ್ಪೋಟ ನಡೆಸಲು ಶಾರಿಕ್ ಸಂಚು ರೂಪಿಸಿದ್ದ. ಆದರೆ ಅದಕ್ಕಾಗಿ ಬಾಂಬ್ ಸಾಗಿಸುತ್ತಿರುವಾಗಲೇ ಸ್ಪೋಟಗೊಂಡಿದ್ದರಿಂದ ದೊಡ್ಡ ಅನಾಹುತ ತಪ್ಪಿ ಹೋಗಿತ್ತು.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ