Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಹಿಂದೂ ನಾಯಕರ ಹತ್ಯೆ ಖಂಡಿಸಿ ಮಂಗಳೂರು ಚಲೋ: ಬಿಎಸ್‌ವೈ

ರಾಜ್ಯದಲ್ಲಿ ಹಿಂದೂ ನಾಯಕರ ಹತ್ಯೆ ಖಂಡಿಸಿ ಮಂಗಳೂರು ಚಲೋ: ಬಿಎಸ್‌ವೈ
ಬೆಂಗಳೂರು , ಬುಧವಾರ, 30 ಆಗಸ್ಟ್ 2017 (13:59 IST)
ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಕಾರ್ಯಕರ್ತರ ಹತ್ಯೆ ಖಂಡಿಸಿ ಸೆ.6 ಮತ್ತು ಸೆ.7 ರಂದು ಮಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಅಡ್ರೆಸ್ ಮಾತ್ರ ಉಳಿದುಕೊಂಡಿದೆ. ಮುಂಬರುವ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಡ್ರೆಸ್ ಇಲ್ಲದಂತೆ ಮಾಡುತ್ತಾರೆ ಎಂದು ಗುಡುಗಿದ್ದಾರೆ.
 
ಸೊಕ್ಕಿನಿಂದ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಮುಂಬರುವ ಚುನಾವಣೆ ತಕ್ಕ ಪಾಠವಾಗಲಿದೆ. ಮತದಾರರು ಭ್ರಷ್ಟ ಸರಕಾರದ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಸರಕಾರ ಜನವಿರೋಧಿ, ರೈತ ವಿರೋಧಿ ಸರಕಾರವಾಗಿದೆ. ಸರಕಾರ ಯಾವಾಗ ತೊಲಗುತ್ತದೆಯೋ ಎಂದು ರಾಜ್ಯದ ಕಾಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ಬಳಿಯೂ ಅಸ್ತ್ರ, ಬ್ರಹ್ಮಾಸ್ತ್ರಗಳಿವೆ: ಐಟಿ ದಾಳಿ ಬಗ್ಗೆ ಡಿಕೆಶಿ ಮಾರ್ಮಿಕ ಉತ್ತರ