Webdunia - Bharat's app for daily news and videos

Install App

ಮಂಗಳೂರು ಗಲಭೆ: ಶಾಂತಿ ಸಭೆ ಬಹಿಷ್ಕರಿಸಿದ ಬಿಜೆಪಿ, ಜೆಡಿಎಸ್

Webdunia
ಗುರುವಾರ, 13 ಜುಲೈ 2017 (17:05 IST)
ಜಿಲ್ಲಾಡಳಿತದ ಶಾಂತಿ ಸಭೆ ಆರಂಭವಾಗಿದ್ದು, ಸಭೆಗೆ ಹಿಂದು ಪರ ಸಂಘಟನೆಗಳ ಮುಖಂಡರು, ಬಿಜೆಪಿ, ಜೆಡಿಎಸ್ ನಾಯಕರು ಬಹಿಷ್ಕಾರ ಹಾಕಿದ್ದಾರೆ.
 
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಸಭೆ ಆಯೋಜಿಸಲಾಗಿದ್ದು, ಜೆಡಿಎಸ್ ನಾಯಕರು ಸಭೆಗೆ ಬಂದರಾದರೂ ನಂತರ ಬಂದ ದಾರಿಗೆ ಸುಂಕವಿಲ್ಲವೆನ್ನುವಂತೆ ಮರಳಿದ್ದಾರೆ. ಕಾಂಗ್ರೆಸ್, ಪಿಎಫ್‌ಐ, ಎಸ್‌ಡಿಪಿಐ ಸೇರಿದಂತೆ ಇತರ ಸಂಘಟನೆಗಳು ಸಭೆಯಲ್ಲಿ ಪಾಲ್ಗೊಂಡಿವೆ ಎಂದು ಮೂಲಗಳು ತಿಳಿಸಿವೆ.
 
ಸಚಿವರಾದ ರಮಾನಾಥ್ ರೈ ಯು.ಟಿ.ಖಾದರ್ ಸಭೆಯಲ್ಲಿ ಉಪಸ್ಥಿತರಿದ್ದು, ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.
 
ಐಜಿಪಿ ಹರಿಶೇಖರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಸಭೆಗೆ ಹಾಜರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments