Webdunia - Bharat's app for daily news and videos

Install App

ಶ್ರೀರಾಮನಿಗೆ ಅವಮಾನ ಮಾಡಿದ್ದ ಶಿಕ್ಷಕಿ ಅಮಾನತು

Krishnaveni K
ಸೋಮವಾರ, 12 ಫೆಬ್ರವರಿ 2024 (17:13 IST)
ಮಂಗಳೂರು: ಪ್ರಭು ಶ್ರೀರಾಮಚಂದ್ರನಿಗೆ ಅವಮಾನ ಮಾಡಿದ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಅಮಾನತು ಮಾಡಿರುವುದಾಗಿ ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಶ್ರೀರಾಮನಿಗೆ ಅವಹೇಳನ ಮಾಡಿದ್ದನ್ನು ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಮುತ್ತಿಗೆಗೆ ಯತ್ನಿಸುವ ವೇಳೆ ಮಧ್ಯಪ್ರವೇಶಿಸಿದ ಆಡಳಿತ ಸಿಬ್ಬಂದಿ ಶಿಕ್ಷಕಿಯನ್ನು ಅಮಾನತು ಮಾಡಿರುವುದಾಗಿ ಹೇಳಿದ್ದಾರೆ.

ಶಿಕ್ಷಕಿ ವಿರುದ್ಧ ಹೆಚ್ಚಿದ ಆಕ್ರೋಶ
ಶಿಕ್ಷಕಿ ಪ್ರಭಾ ವಿರುದ್ಧ ಧರ್ಮ ನಿಂದನೆ ಆರೋಪ ಕೇಳಿಬಂದಿದ್ದು, ಸ್ಥಳೀಯರಿಂದ ಶಾಲೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಾಲೆ ವಿರುದ್ಧ ಹಿಂದೂ ಸಂಘಟನೆಗಳು ಭಾರೀ ಪ್ರತಿಭಟನೆಗೆ ಮುಂದಾದಾಗ ಪೊಲೀರು ತಡೆದರು. ಈ ವೇಳೆ ಸ್ಥಳೀಯರು ಶಿಕ್ಷಕಿ ಮತ್ತು ಶಾಲಾ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಶಿಕ್ಷಕಿಯನ್ನು ಅಮಾನತು ಮಾಡಿರುವುದಾಗಿ ಅಧಿಕೃತ ಪತ್ರ ತೋರಿಸಲಾಯಿತು.

ಪ್ರಕರಣದ ಹಿನ್ನಲೆ
ಮಂಗಳೂರಿನ ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಪ್ರಭಾ ಅಯೋಧ್ಯೆ ರಾಮಮಂದಿರ ಮತ್ತು ಪ್ರಭು ರಾಮಚಂದ್ರನ ಬಗ್ಗೆ ವಿದ್ಯಾರ್ಥಿಗಳ ಮುಂದೆ ಅವಹೇಳನಕಾರಿಯಾಗಿ ಮಾತನಾಡಿದ್ದರು.ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದ್ದಾರೆ. ಇದನ್ನು ವಿದ್ಯಾರ್ಥಿಗಳು ಪೋಷಕರಿಗೆ ಹೇಳಿದ್ದರು. ಈ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳ ಜೊತೆಗೂಡಿ ಪೋಷಕರು ಶಾಲೆ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದರು.  ಅಲ್ಲದೆ ಶಿಕ್ಷಕಿ ವಿರುದ್ಧ ಪೊಲೀಸರಿಗೂ ದೂರು ನೀಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments