Webdunia - Bharat's app for daily news and videos

Install App

Mangaluru: ಮುಸ್ಲಿಮರ ಆಕ್ರೋಶಕ್ಕೆ ಬೆದರಿ ಹಿಂದೂ ಮುಖಂಡರ ವಿರುದ್ಧ ಸರ್ಕಾರದಿಂದ ಕೇಸ್, ನೋಟಿಸ್

Krishnaveni K
ಸೋಮವಾರ, 2 ಜೂನ್ 2025 (12:35 IST)
ಮಂಗಳೂರು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ತಂದ ಪ್ರಕರಣಗಳು ನಡೆದ ಬೆನ್ನಲ್ಲೇ ಈಗ ಮುಸ್ಲಿಮರ ಆಕ್ರೋಶಕ್ಕೆ ಬೆದರಿದ ರಾಜ್ಯ ಸರ್ಕಾರ ಹಿಂದೂ ಮುಖಂಡರ ಮೇಲೆ ಕೇಸ್, ಗಡೀಪಾರಿನ ನೋಟಿಸ್ ನೀಡುತ್ತಿದೆ.

ಮೊನ್ನೆಯಷ್ಟೇ ಬಂಟ್ವಾಳದಲ್ಲಿ ಮುಸ್ಲಿಂ ಯುವಕ ಅಬ್ದುಲ್ ರಹಿಮಾನ್ ಕೊಲೆ ನಡೆದಿತ್ತು. ಈ ಹಿಂದೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಈ ಹತ್ಯೆ ನಡೆಸಲಾಗಿದೆ ಎನ್ನಲಾಗಿದೆ. ಈ ಕೊಲೆ ಮುಸ್ಲಿಂ ಸಮುದಾಯವನ್ನು ಕಾಂಗ್ರೆಸ್ ವಿರುದ್ಧ ತಿರುಗಿಬೀಳುವಂತೆ ಮಾಡಿದೆ.

ಬಂಟ್ವಾಳದ ಮುಸ್ಲಿಂ ಸಮುದಾಯದ ಕಾಂಗ್ರೆಸ್ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿ ಆಕ್ರೋಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಈಗ ರಾಜ್ಯ ಸರ್ಕಾರ ದಕ್ಷಿಣ ಕನ್ನಡದ ಪ್ರಮುಖ ಹಿಂದೂ ಮುಖಂಡರ ಮೇಲೆ ಕೇಸ್ ಜಡಿಯುತ್ತಿದೆ.

ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ 15 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡೀಪಾರಿಗೆ ಆದೇಶಿಸಿ ನೋಟಿಸ್ ನೀಡಲಾಗಿದೆ. ಇದೀಗ ಅವರು ವಕೀಲರೊಂದಿಗೆ ಜೂನ್ 6 ರಂದು ವಿಚಾರಣೆಗೆ ಹಾಜರಾಗಬೇಕಿದೆ.

ಕೋಮು ಪ್ರಚೋದನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸರ್ಕಾರ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಹಿಂದೂ ಸಮುದಾಯದ ಪ್ರಮುಖ ಮುಖಂಡರಿಗೆ ನೋಟಿಸ್, ಕೇಸ್ ದಾಖಲಿಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಒಡಿಶಾದ ಪುರಿ ಜಗನ್ನಾಥ ಯಾತ್ರೆಯಲ್ಲಿ ಕಾಲ್ತುಳಿತ: 600 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

ಮುಂದಿನ ಸುದ್ದಿ
Show comments