Webdunia - Bharat's app for daily news and videos

Install App

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಫಾಜಿಲ್ ತಮ್ಮನೇ ಸೂತ್ರಧಾರಿ: ಇಬ್ಬರು ಹಿಂದೂಗಳನ್ನೂ ಬಳಸಿ ಹತ್ಯೆ

Krishnaveni K
ಶನಿವಾರ, 3 ಮೇ 2025 (14:50 IST)
ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಈ ಹಿಂದೆ ಹತ್ಯೆಯಾದ ಫಾಜಿಲ್ ತಮ್ಮನೇ ಸೂತ್ರಧಾರಿ, ಆತ ಇಬ್ಬರು ಹಿಂದೂಗಳನ್ನು ಬಳಸಿಕೊಂಡೇ ಕೃತ್ಯವೆಸಗಿದ್ದ ಎಂದು ತಿಳಿದುಬಂದಿದೆ.

ಬಜ್ಪೆಯಲ್ಲಿ ನಡು ರಸ್ತೆಯಲ್ಲೇ ಸುಹಾಸ್ ಶೆಟ್ಟಿ ಹತ್ಯೆ ಮಾಡಿದ್ದ ಆರೋಪದಲ್ಲಿ ಎಲ್ಲಾ 8 ಮಂದಿ ಆರೋಪಿಗಳನ್ನೂ ಪೊಲೀಸರು ಈಗ ಬಂಧಿಸಿದ್ದಾರೆ. ಈ ಪೈಕಿ ಇಬ್ಬರು ಹಿಂದೂಗಳೂ ಸೇರಿಕೊಂಡಿದ್ದಾರೆ ಎಂಬುದು ವಿಶೇಷ.

ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಫಾಜಿಲ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಆ ಕೊಲೆಯಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿ. ಇದೇ ವೈಷಮ್ಯದಿಂದ ಫಾಜಿಲ್ ಸಹೋದರನೇ ಸುಹಾಸ್ ಕೊಲೆಗೆ ಸ್ಕೆಚ್ ಹಾಕಿದ್ದ.

ಸುಹಾಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಸಪ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್, ರಂಜಿತ್ ಎಂಬವರು ಬಂಧಿತರು. ಫಾಜಿಲ್ ತಮ್ಮ ಆದಿಲ್ ಕೊಲೆಗೆ ಸಂಚು ರೂಪಿಸಿದ್ದಲ್ಲದೆ 5 ಲಕ್ಷ ರೂ. ಫಂಡಿಂಗ್ ಮಾಡಿದ್ದ. ಆರೋಪಿಗಳಲ್ಲಿ ಒಬ್ಬರಾದ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಮಾರಣಾಂತಿಕ ಹಲ್ಲೆ ನಡೆಸಿದ್ದ. ಹೀಗಾಗಿ ಆತನೂ ಈ ಕೊಲೆಯಲ್ಲಿ ಕೈ ಜೋಡಿಸಿದ್ದ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಗ್ಯಾರಂಟಿ ಬೇಡ ಎನ್ನಿ ಎಂದ ಬಸವರಾಜ ರಾಯರೆಡ್ಡಿ: ಈ ಕಂಡೀಷನ್ ಮೊದ್ಲೇ ಹೇಳ್ಬೇಕಿತ್ತು ಎಂದ ಜನ

ಅಂತೂ ಮುಖ್ಯಮಂತ್ರಿ ಪಟ್ಟ ಬಿಡುವ ಕಾಲ ಬಂತು: ನೆಟ್ಟಿಗರಿಂದ ಸಿದ್ದರಾಮಯ್ಯ ಟ್ರೋಲ್

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಮುಂದಿನ ಸುದ್ದಿ
Show comments