Webdunia - Bharat's app for daily news and videos

Install App

ಮ್ಯಾನ್‌ಹೋಲ್‌ನಲ್ಲಿ ಮೂವರು ಬಲಿ

Webdunia
ಮಂಗಳವಾರ, 7 ಮಾರ್ಚ್ 2017 (08:20 IST)
ಮ್ಯಾನ್‌ಹೋಲ್ ದುರಸ್ತಿ ಸಂದರ್ಭದಲ್ಲಿ ಇಬ್ಬರು ಕಾರ್ಮಿಕರು ಮತ್ತು ಟ್ರಾಕ್ಟರ್ ಚಾಲಕ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಸಿವಿ ರಾಮನ್ ನಗರದ ಕಗ್ಗದಾಸಪುರ ಮುಖ್ಯರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

 
ಸೋಮವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಟ್ರಾಕ್ಟರ್‌ನಲ್ಲಿ ಬಂದಿದ್ದ ಇಬ್ಬರು ಕಾರ್ಮಿಕರು ಮ್ಯಾನ್‌ಹೋಲ್‌ನಲ್ಲಿ ಇಳಿದಿದ್ದಾರೆ. 17 ಅಡಿ ಕೆಳಕ್ಕೆ ಇಳಿದಿದ್ದ ಅವರು ಆಮ್ಲಜನಕದ ಕೊರತೆಯಿಂದ ಕಿರುಚಲು ಪ್ರಾರಂಭಿಸುತ್ತಿದ್ದಂತೆ ಟ್ರಾಕ್ಟರ್ ಚಾಲಕ ಕೆಳಕ್ಕೆ ಇಳಿದಿದ್ದಾನೆ. ಆದರೆ ಕಾಪಾಡಲು ಹೋದವನು ಸೇರಿದಂತೆ ಮೂವರು ಜೀವ ಕಳೆದುಕೊಂಡಿದ್ದಾರೆ.
 
ಮೃತರನ್ನು ಇನ್ನುವರೆಗೆ ಗುರುತಿಸಲಾಗಿಲ್ಲ. ಇವರು ಮೂಲತಃ ಆಂಧ್ರದವರೆಂದು ಹೇಳಲಾಗುತ್ತಿದೆ.
 
ರಾತ್ರಿ 1 ಗಂಟೆ ಸುಮಾರಿಗೆ ಈ ಕುರಿತು ಮಾಹಿತಿ ಪಡೆದ  ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಶವಗಳನ್ನು ಮೇಲೆತ್ತಿದ್ದಾರೆ. 
 
ಕಾರ್ಮಿಕರನ್ನು ಮ್ಯಾನ್‌ಹೋಲ್‌ಗೆ ಇಳಿಸಬಾರದು, ಯಂತ್ರಗಳನ್ನು ಬಳಸಬೇಕು ಎಂಬ ಕಾನೂನಿದ್ದರೂ ಕಾರ್ಮಿಕರನ್ನು ಯಮಪಾಶಕ್ಕೆ ತಳ್ಳಿದ ಗುತ್ತಿಗೆದಾರ ಮತ್ತು ಆಳುವವರ ನಿರ್ಲಕ್ಷಕ್ಕೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ.
 
ಬಿಬಿಎಂಪಿ ಮತ್ತು ಬಿಡಬ್ಲ್ಯೂಎಸ್ಎಸ್‌ಬಿ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸರು ನಿರ್ಲಕ್ಷ್ಯದ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments