Publish Date: Wed, 16 Aug 2023 (15:25 IST)
Updated Date: Wed, 16 Aug 2023 (18:29 IST)
ಲೋಕಸಭೆ ಚುನಾವಣೆಗೆ ಆಪರೇಷನ್ ಹಸ್ತ ವಿಚಾರಕ್ಕೆ ಸಂಬಂಧಪಟ್ಟಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೊಡ್ಡ ಲೀಡರ್ ಅಲ್ಲ, ಅನೇಕರು ನಮ್ಮ ಪಕ್ಷಕ್ಕೆ ಬರ್ತಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಹೇಳಿದ್ದೆ. ಮತದಾನದ ಪ್ರಮಾಣವನ್ನ ಹೆಚ್ಚಿಸಲು ಕರೆ ಕೊಟ್ಟಿದ್ದೇವೆ. ಸ್ಥಳೀಯ ನಾಯಕರೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ತಾರೆ. ಪಕ್ಷಕ್ಕೆ ಒಳ್ಳೆಯದಾಗುವ ಕೆಲಸವನ್ನ ನಾವು ಮಾಡುತ್ತೇವೆ ಎಂದು ತಿಳಿಸಿದರು.