Webdunia - Bharat's app for daily news and videos

Install App

ಅನೇಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ತಿದ್ದಾರೆ

Webdunia
ಶುಕ್ರವಾರ, 21 ಏಪ್ರಿಲ್ 2023 (18:50 IST)
ಬಿಜೆಪಿಯಲ್ಲಿ 30, 40 ವರ್ಷಗಳಿಂದ ಇದ್ದವರು ಈಗ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ, ಬಿಜೆಪಿಯ ಅಂತರಿಕ ವಿಚಾರ ಹೊರಗೆ ಬರ್ತಿವೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್​​​ ಬಿಜೆಪಿ ವಿರುದ್ಧ ಕಿಡಿಕಾರಿದ್ರು.. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾಜಿ ಸಿಎಂ ಜಗದೀಶ್​​​ ಶೆಟ್ಟರ್ ನಮ್ಮ ಪಕ್ಷಕ್ಕೆ ಬಂದಿದ್ದಾರೆ, ಡಿಸಿಎಂ ಆಗಿದ್ದ ಲಕ್ಷ್ಮಣ್​​​​​ ಸವದಿ ಕೂಡ ಪಕ್ಷ ಸೇರಿದ್ದಾರೆ. ಇದಕ್ಕೆಲ್ಲಾ ಕಾರಣ ಬಿಜೆಪಿಯ ಆಂತರಿಕ ಬೆಳವಣಿಗೆ ಎಂದು ಆರೋಪಿಸಿದ್ರು.. ಇನ್ನು‌ ಬಹಳ ಜನ ಬಿಜೆಪಿಯಲ್ಲಿದ್ದೇ ನೋವು ಪಡ್ತಿದ್ದಾರೆ, ನಮ್ಮ ಜೊತೆ ಆನೇಕ ವಿಚಾರ ಹಂಚಿಕೊಳ್ತಿದ್ದಾರೆ. ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಪಕ್ಷ ಕಾಂಗ್ರೆಸ್ ಎಂದು ತಮ್ಮ ಪಕ್ಷದ ಕುರಿತು ಪರಮೇಶ್ವರ್​​ ಮೆಚ್ಚುಗೆ ವ್ಯಕ್ತಪಡಿಸಿದ್ರು.. ಇಡೀ ದೇಶಕ್ಕೆ ಕಾಂಗ್ರೆಸ್ ತನ್ನತನ ತೋರಿಸುತ್ತಿದೆ, ಕೆಲವೇ ದಿನಗಳಲ್ಲಿ ಬಿಜೆಪಿ ಭ್ರಷ್ಟ ಸರ್ಕಾರ ಮನೆಗೆ ಹೋಗುತ್ತೆ, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತ ಎಲ್ಲರಿಗೂ ಗೊತ್ತಿದೆ.. ಅಂಥಹ ಎಲ್ಲರೂ ಕಾಂಗ್ರೆಸ್ ಕಡೆ ಮುಖಮಾಡಿದ್ದಾರೆ, ಬಿಜೆಪಿಯಲ್ಲಿ ಒಬ್ಬೊಬ್ಬರನ್ನೇ ಮುಗಿಸುತ್ತಿದ್ದಾರೆ ಎಂದು ಪರಮೇಶ್ವರ್​​ ಆರೋಪಿಸಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments