Webdunia - Bharat's app for daily news and videos

Install App

ವರುಣಾರ್ಭಟಕ್ಕೆ ಹಲವು ಮನೆಗಳು ನೆಲಸಮ

Webdunia
ಶನಿವಾರ, 13 ಆಗಸ್ಟ್ 2022 (20:34 IST)
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಬಾರಿಯ ಮಳೆ ಹಲವರ ಜೀವನ ಕಸಿದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಹಲವು ಮನೆಗಳು ನೆಲಸಮವಾಗಿವೆ.ಮೂಡಿಗೆರೆ ತಾಲೂಕಿನ ದಿಣ್ಣೆಕೆರೆಯಲ್ಲಿ ಒಂದು ಮನೆ ನೆಲಸಮವಾಗಿದೆ. ಇಲ್ಲಿನ ದಿನೇಶ್ ಎಂಬುವರಿಗೆ ಸೇರಿದ ಮನೆ ಸಂಪೂರ್ಣ ನಾಶವಾಗಿದೆ..ನೆಲ ಸೇರಿದ ಮನೆಯ ಅವಶೇಷಗಳ ಅಡಿಯಲ್ಲಿ ಆಹಾರ ಸಾಮಗ್ರಿ, ಕೂಡಿಟ್ಟ ಹಣ ಎಲ್ಲವೂ ಮಣ್ಣು ಪಾಲಾಗಿದೆ.. ಮನೆ ಕಳೆದುಕೊಂಡು ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ..ಅಲ್ಲದೇ, ಕಳಸ ತಾಲೂಕಿನ ಕೆಳಗೂಡು ಗ್ರಾಮದಲ್ಲಿ ಹರೀಶ್ ಎಂಬುವರ ಮನೆ ಮೇಲ್ಚಾವಣಿ ಮತ್ತು ಗೋಡೆ ಕುಸಿತವಾಗಿದೆ. ತರೀಕೆರೆ ತಾಲೂಕಿನಲ್ಲೂ ಮತ್ತೆ ಮೂರು ಮನೆಗಳ ಗೋಡೆ ಕುಸಿತವಾಗಿದೆ. ಬಾವಿಕೆರೆ ಗ್ರಾಮದ ಬಸಪ್ಪ ಹಾಗೂ ಗಂಗಣ್ಣ ಎಂಬವರಿಗೆ ಸೇರಿದ ಮನೆಗಳಿಗೆ ಮತ್ತು ಬಿ.ರಾಮನಹಳ್ಳಿ ಗ್ರಾಮದ ದುರ್ಗಮ್ಮ ಎಂಬುವರ ಮನೆ ಗೋಡೆಯೂ ಹಾನಿಯಾಗಿದೆ. ತೀವ್ರ ಮಳೆಯಿಂದ ಹಲವರು ಜೀವನಾಶ್ರಯ ಕಳೆದುಕೊಂಡಿದ್ದು, ಸರ್ಕಾರ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments