Select Your Language

Notifications

webdunia
webdunia
webdunia
webdunia

ಕುಮಾರ ಸ್ವಾಮಿ ಪಕ್ಷಕ್ಕೆ ಹಲವು ನಾಯಕರು ಸೇರ್ಪಡೆ

ಕುಮಾರ ಸ್ವಾಮಿ ಪಕ್ಷಕ್ಕೆ ಹಲವು ನಾಯಕರು ಸೇರ್ಪಡೆ
mysore , ಶನಿವಾರ, 2 ಅಕ್ಟೋಬರ್ 2021 (21:08 IST)
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಾಂಗ್ರೆಸ್ ಪಕ್ಷದ ಸುಮಾರು ಆರನೂರಕ್ಕೂ ಹೆಚ್ಚು ಮುಖಂಡರು ಹಾಗೂ ಮೂರು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.ಬಿಡದಿಯ ತೋಟದಲ್ಲಿ ಬೆಳಗ್ಗೆ ಹೆಚ್.ಡಿ.ಕೋಟೆ ತಾಲೂಕಿನ ಹಿರಿಯ ಮುಖಂಡ ಕೃಷ್ಣನಾಯಕ್ ಮತ್ತು ಕುರುಬ ಸಮುದಾಯದ ಮುಖಂಡ ಯತೀಶ್ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷವನ್ನು ಸೇರಿದರು. ಬಳಿಕ ಮಾಜಿ ಮುಖ್ಯಮಂತ್ರಿಗಳ ಜತೆ ಪಕ್ಷದ ಕೇಂದ್ರ ಕಚೇರಿಗೆ ಆಗಮಿಸಿ, ಜೆಡಿಎಸ್ ಪಕ್ಷದ ಹಸಿರು  ಶಾಲು ಧರಿಸಿಕೊಳ್ಳುವ ಮೂಲಕ ಜನತಾ ಪರಿವಾರಕ್ಕೆ ಪ್ರವೇಶ ಪಡೆದರು. ಪಕ್ಷಕ್ಕೆ ಸೇರ್ಪಡೆಗೊಂಡ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  ಅವರು ಸ್ವಾಗತ  ಮಾಡಿಕೊಂಡರು.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವಕ್ಕೆ ಶಾಂತಿ ಮಂತ್ರ ಹೇಳಿಕೊಟ್ಟ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಜನ್ಮದಿನದ ಜಯಂತಿ