Webdunia - Bharat's app for daily news and videos

Install App

ಧರ್ಮಸ್ಥಳ ಗ್ರಾಮಾಭಿವೃದ್ದಿ ಬ್ಯಾಂಕ್‍ನಿಂದ ಹಲವು ಯೋಜನೆ ಜಾರಿ

Webdunia
ಶುಕ್ರವಾರ, 10 ಆಗಸ್ಟ್ 2018 (14:09 IST)
ರೈತರು ಜೀವನದಲ್ಲಿ ಬದಲಾವಣೆ ತರಬೇಕಾದರೆ ಅವರು ಸ್ವಾವಲಂಬಿಗಳಾಬೇಕು. ಹೀಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಬ್ಯಾಂಕ್‍ನಿಂದ ರೈತರಿಗಾಗಿ ಹಲವು ಯೋಜನೆಗಳನ್ನ ಜಾರಿ ಮಾಡಿದ್ದು, ರೈತರು ಹಾಗೂ ಮಹಿಳೆಯರು  ಪ್ರಯೋಜನ ಪಡೆದುಕೊಳ್ಳಬೇಕು. ಹೀಗಂತ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

ಆನೇಕಲ್‍ನ ಚಂದಾಪುರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ, ರೈತರು ಪ್ರತಿಯೊಂದಕ್ಕೂ ಪ್ರಕೃತಿ ಮೇಲೆ ಅವಲಂಬಿತವಾಗಿದ್ದು ಅತಿವೃಷ್ಟಿ -ಅನಾವೃಷ್ಟಿಗಳ ಮೂಲಕ ತೊಂದರೆ ಅನುಭವಿಸುವಂತಾಗಿದೆ. ಸರ್ಕಾರ ರೈತರ ಅಭಿವೃದಿಗಾಗಿ ಸಾಲ ಮನ್ನಾ ಮಾಡುವ ಮೂಲಕ ಕೊಂಚ ನೆಮ್ಮದಿ ತಂದಿದೆ.

ರೈತರ ಉದ್ದಾರಕ್ಕೆ ಸಾಲ ಮನ್ನಾ ಒಂದೇ ಪರಿಹಾರವಲ್ಲ. ಬದಲಾಗಿ ಬೇರೆ ಪರ್ಯಾಯ ಯೋಜನೆಗಳನ್ನ ಸರ್ಕಾರಗಳ ನೀಡುವ ಮೂಲಕ ರೈತರ ಅಭಿವೃದ್ದಿಗೆ ಶ್ರಮಿಸಬೇಕು ಎಂದರು. ಅಲ್ಲದೇ ಧರ್ಮಸ್ಥಳ ಗ್ರಾಮಾಭಿವೃದ್ದಿ ಬ್ಯಾಂಕ್ ವತಿಯಿಂದ ಸುಮಾರು 8 ಸಾವಿರ ಕೋಟಿ ಸಾಲವನ್ನ ರೈತರಿಗೆ ನೀಡಿದ್ದೇವೆ. ಆ ಮೂಲಕ ರೈತರ ಸ್ವಾವಲಂಬಿ ಜೀವನಕ್ಕೆ ನಮ್ಮ ಕೈಲಾದ ಸಹಾಯವನ್ನ ನಾವು ಮಾಡುತ್ತಿದ್ದೇವೆ ಎಂದು ವಿರೇಂದ್ರ ಹೆಗ್ಗಡೆ ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments