Webdunia - Bharat's app for daily news and videos

Install App

ಧರ್ಮಸ್ಥಳ ಗ್ರಾಮಾಭಿವೃದ್ದಿ ಬ್ಯಾಂಕ್‍ನಿಂದ ಹಲವು ಯೋಜನೆ ಜಾರಿ

Webdunia
ಶುಕ್ರವಾರ, 10 ಆಗಸ್ಟ್ 2018 (14:09 IST)
ರೈತರು ಜೀವನದಲ್ಲಿ ಬದಲಾವಣೆ ತರಬೇಕಾದರೆ ಅವರು ಸ್ವಾವಲಂಬಿಗಳಾಬೇಕು. ಹೀಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಬ್ಯಾಂಕ್‍ನಿಂದ ರೈತರಿಗಾಗಿ ಹಲವು ಯೋಜನೆಗಳನ್ನ ಜಾರಿ ಮಾಡಿದ್ದು, ರೈತರು ಹಾಗೂ ಮಹಿಳೆಯರು  ಪ್ರಯೋಜನ ಪಡೆದುಕೊಳ್ಳಬೇಕು. ಹೀಗಂತ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

ಆನೇಕಲ್‍ನ ಚಂದಾಪುರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ, ರೈತರು ಪ್ರತಿಯೊಂದಕ್ಕೂ ಪ್ರಕೃತಿ ಮೇಲೆ ಅವಲಂಬಿತವಾಗಿದ್ದು ಅತಿವೃಷ್ಟಿ -ಅನಾವೃಷ್ಟಿಗಳ ಮೂಲಕ ತೊಂದರೆ ಅನುಭವಿಸುವಂತಾಗಿದೆ. ಸರ್ಕಾರ ರೈತರ ಅಭಿವೃದಿಗಾಗಿ ಸಾಲ ಮನ್ನಾ ಮಾಡುವ ಮೂಲಕ ಕೊಂಚ ನೆಮ್ಮದಿ ತಂದಿದೆ.

ರೈತರ ಉದ್ದಾರಕ್ಕೆ ಸಾಲ ಮನ್ನಾ ಒಂದೇ ಪರಿಹಾರವಲ್ಲ. ಬದಲಾಗಿ ಬೇರೆ ಪರ್ಯಾಯ ಯೋಜನೆಗಳನ್ನ ಸರ್ಕಾರಗಳ ನೀಡುವ ಮೂಲಕ ರೈತರ ಅಭಿವೃದ್ದಿಗೆ ಶ್ರಮಿಸಬೇಕು ಎಂದರು. ಅಲ್ಲದೇ ಧರ್ಮಸ್ಥಳ ಗ್ರಾಮಾಭಿವೃದ್ದಿ ಬ್ಯಾಂಕ್ ವತಿಯಿಂದ ಸುಮಾರು 8 ಸಾವಿರ ಕೋಟಿ ಸಾಲವನ್ನ ರೈತರಿಗೆ ನೀಡಿದ್ದೇವೆ. ಆ ಮೂಲಕ ರೈತರ ಸ್ವಾವಲಂಬಿ ಜೀವನಕ್ಕೆ ನಮ್ಮ ಕೈಲಾದ ಸಹಾಯವನ್ನ ನಾವು ಮಾಡುತ್ತಿದ್ದೇವೆ ಎಂದು ವಿರೇಂದ್ರ ಹೆಗ್ಗಡೆ ತಿಳಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments