Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಸ್ವಾಗತಕ್ಕೆ ಓಡೋಡಿ ಬಂದ ಮರೀಗೌಡಗೆ ಕೈ ಕಾರ್ಯಕರ್ತರಿಂದ ಘೇರಾವ್

ಸಿದ್ದರಾಮಯ್ಯ ಸ್ವಾಗತಕ್ಕೆ ಓಡೋಡಿ ಬಂದ ಮರೀಗೌಡಗೆ ಕೈ ಕಾರ್ಯಕರ್ತರಿಂದ ಘೇರಾವ್

Sampriya

ಮೈಸೂರು , ಶುಕ್ರವಾರ, 27 ಸೆಪ್ಟಂಬರ್ 2024 (14:36 IST)
Photo Courtesy X
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಾಗತಕ್ಕೆ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಂದಿದ್ದ ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಅಧ್ಯಕ್ಷ ಕೆ.ಮರೀಗೌಡ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರೇ ಇಂದು ಘೇರಾವ್ ಹಾಕಿದ ಘಟನೆ ನಡೆದಿದೆ.

ಸಿದ್ದರಾಮಯ್ಯ ಆಪ್ತರೂ ಆಗಿರುವ ಮರೀಗೌಡ ಅವರ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ನಿಮ್ಮಿಂದ ನಮ್ಮ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಕಾರು ಹತ್ತಿಸಿ ಅಲ್ಲಿಂದ ವಾಪಸ್ ಕಳುಹಿಸಿದ್ದಾರೆ.

ಈ ವೇಳೆ ಪ್ರತಿಭಟನಕಾರರಿಗೆ ಮರೀಗೌಡ ಅವರು ಸಮಜಾಯಿಸಿ ನೀಡಲು ಮುಂದಾಗಿದ್ದಾರೆ. ಆದರೆ ಕಾರ್ಯಕರ್ತರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ನಿನ್ನ ಭಾಷಣ ಬೇಡ ಹೊರಡು ಎಂದು ಬಲವಂತವಾಗಿ ಕಾರು ಹತ್ತಿಸಿ ಕಳಿಸಿದ್ದಾರೆ.

ಇಂದು ಸಿದ್ದರಾಮಯ್ಯ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಮೈಸೂರು ನಗರಕ್ಕೆ ತೆರಳಿದ್ದಾರೆ. ಬಳಿಕ ಮೈಸೂರಿನಲ್ಲಿ ನಡೆಯಲಿರುವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಇನ್ನೂ ಮುಂತಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯ ಸ್ಥಾನ ನೀಡಲು ಫ್ರಾನ್ಸ್‌ ಅಧ್ಯಕ್ಷ ಒತ್ತಾಯ