Webdunia - Bharat's app for daily news and videos

Install App

ಜಿಲ್ಲಾಧಿಕಾರಿಗೆ ಧಮ್ಕಿ: ಮರಿಗೌಡನಿಗೆ ಆಗಸ್ಟ್ 16ರ ವರೆಗೆ ನ್ಯಾಯಾಂಗ ಬಂಧನ

Webdunia
ಬುಧವಾರ, 3 ಆಗಸ್ಟ್ 2016 (18:49 IST)
ಮೈಸೂರು ಜಿಲ್ಲಾಧಿಕಾರಿ ಶಿ.ಶಿಖಾ ಅವರಿಗೆ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ.ಮರಿಗೌಡನನ್ನು 3ನೇ ಜೆಎಂಎಫ್ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ಆಗಸ್ಟ್ 16 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
 
ತಹಶೀಲ್ದಾರ್ ವರ್ಗಾವಣೆಗೆ ಸಂಬಂಧಿಸಿದಂತೆ ಸಿಎಂ ಆಪ್ತ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೆ.ಮರಿಗೌಡ ಜಿಲ್ಲಾಧಿಕಾರಿಗಳಿಗೆ ಧಮ್ಕಿ ಹಾಕಿದ್ದ. ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರು ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದರು.
 
ಘಟನೆ ನಡೆದ ಒಂದು ತಿಂಗಳಿನಿಂದ ಸಿಎಂ ಆಪ್ತ ಮರಿಗೌಡ ತಲೆ ಮರೆಸಿಕೊಂಡಿದ್ದ. ಹಾಗೂ ಪ್ರಕರಣ ಕುರಿತು ಜಾಮೀನು ಕೋರಿ ಕೋರ್ಟ್‌ ಮೊರೆ ಹೋಗಿದ್ದ. ಆದರೆ, ನ್ಯಾಯಾಧೀಶರು ಜಾಮೀನು ಅರ್ಜಿವನ್ನು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಇಂದು ನಜರ್‌ಬಾದ್ ಪೊಲೀಸ್ ಠಾಣೆಗೆ ಶರಣಾಗಿದ್ದಾರೆ.
 
ಪೊಲೀಸ್ ಠಾಣೆಗೆ ಶರಣಾದರೇ ಶೀಘ್ರದಲ್ಲೇ ಜಾಮೀನು ದೊರೆಯುತ್ತದೆ ಎಂದು ವಕೀಲರು ನೀಡಿದ ಸಲಹೆ ಮೇರೆಗೆ ಇಂದು ಸಿಎಂ ಆಪ್ತ ಮರಿಗೌಡ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಮುಂದಿನ ಸುದ್ದಿ
Show comments