Select Your Language

Notifications

webdunia
webdunia
webdunia
webdunia

ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದವರು ಮಸಣಕ್ಕೆ

ಮದುವೆ ದಿಬ್ಬಣಕ್ಕೆ ತೆರಳುತ್ತಿದ್ದವರು ಮಸಣಕ್ಕೆ
ತುಮಕೂರು , ಗುರುವಾರ, 4 ಡಿಸೆಂಬರ್ 2014 (11:51 IST)
ಮದುವೆ ದಿಬ್ಬಣವನ್ನು ಹೊತ್ತು ತೆರಳುತ್ತಿದ್ದ ಟಾಟಾ ಏಸ್ ವಾಹನವೊಂದು ಪಲ್ಟಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, 18 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಮಧುಗಿರಿ ಪಟ್ಟಣದ ಬಳಿ ಜರುಗಿದೆ.
 
ಮದುವೆ ಸಂಭ್ರಮಕ್ಕೆಂದು ಮದುಗಿರಿಯಿಂದ ಮಡಕಶಿರಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಸಿದ್ದಪ್ಪ, ರಂಗಪ್ಪ ಹಾಗೂ ಓಬವ್ವ ಎಂಬುವವರು ಸಾವನ್ನಪ್ಪಿದ್ದಾರೆ. ಅಲ್ಲದೆ 18 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 
 
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸರು, ವಾಹನದ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿದ್ದುದೇ ಈ ಅಪಘಾತಕ್ಕೆ ಕಾರಣ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. 
 

Share this Story:

Follow Webdunia kannada