Webdunia - Bharat's app for daily news and videos

Install App

ಹುತಾತ್ಮ ರೈತ ದಿನಾಚರಣೆ: ಜನಪ್ರತಿನಿಧಿಗಳು ಭಾಗವಹಿಸಲು ಅವಕಾಶವಿಲ್ಲ!

Webdunia
ಗುರುವಾರ, 21 ಜುಲೈ 2016 (09:12 IST)
ಧಾರವಾಡ ಜಿಲ್ಲೆಯ ನವಲಗುಂದನಲ್ಲಿ ಹುತಾತ್ಮ ರೈತರ ದಿನಾಚಾರಣೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳಿಗೆ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ರೈತಪರ ಸಂಘಟನೆಗಳು ತಿಳಿಸಿವೆ.
 
ಧಾರವಾಡ ಜಿಲ್ಲೆಯ ನವಲಗುಂದ ರೈತ ಬಂಡಾಯದಲ್ಲಿ ಇಬ್ಬರು ರೈತರು ಮೃತಪಟ್ಟು 36 ವರ್ಷ ಗತಿಸಿದ ಹಿನ್ನೆಲೆಯಲ್ಲಿ ರೈತ ಪರ ಸಂಘಟನೆಗಳು ಇಂದು ಹುತಾತ್ಮ ರೈತ ದಿನಾಚರಣೆ ಆಚರಿಸಲು ನಿರ್ಧರಿಸಿವೆ.
 
ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ಜೋಡಣೆಗೆ ಆಗ್ರಹಿಸಿ ರೈತರು ಕಳೆದ ಒಂದು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಜನಪ್ರತಿನಿಧಿಗಳು ಪ್ರತಿಭಟನೆಗೆ ಸ್ಪಂದಿಸಿಲ್ಲ ಎಂದು ಹುತಾತ್ಮ ರೈತರ ಸ್ತೂಪಕ್ಕೆ ಅವರು ಮಾಲಾರ್ಪಣೆ ಮಾಡಲು ನಾವು ಅವಕಾಶ ನೀಡುವುದಿಲ್ಲ ಎಂದು ರೈತರು ತಿಳಿಸಿದ್ದಾರೆ.
 
ಹೋರಾಟದಲ್ಲಿ ಶಾಂತಿ ಸುವ್ಯವಸ್ಥೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ 5 ಡಿವೈಎಸ್‌ಪಿ, 10 ಇನ್ಸ್‌ಪೆಕ್ಟರ್, 25 ಪಿಎಸ್‌ಐ ಮತ್ತು 800 ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಐಜಿಪಿ ಡಾ.ಕೆ.ರಾಮಚಂದ್ರರಾವ್ ತಿಳಿಸಿದ್ದಾರೆ.
 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments