ಮುಖವಾಡಗಳು ಕಳಚಿ ಬೀಳಬೇಕು-ಗೃಹ ಸಚಿವ ಅರಗ ಜ್ಞಾನೇಂದ್ರ

Webdunia
ಮಂಗಳವಾರ, 17 ಜನವರಿ 2023 (19:37 IST)
ಸ್ಯಾಂಟ್ರೋ ರವಿ ಹಿಂದೆ ಇರೋ ಮುಖವಾಡಗಳು ಕಳಚಿ ಬೀಳಬೇಕು. ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ನೀಡಲಾಗಿದೆ ಅಂತ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ಯಾಂಟ್ರೋ ರವಿ ಕೇಸನ್ನು ಸಿಐಡಿಗೆ ವಹಿಸಲಾಗಿದೆ. ಮೈಸೂರು ಪೊಲೀಸರು ತನಿಖೆ ಮಾಡುತ್ತಿದ್ದರು. ತನಿಖೆ ಮತ್ತಷ್ಟು ಪಾರದರ್ಶಕವಾಗಿ ನಡೆಯಲು‌. ಯಾವುದೇ ಅನುಮಾನ ಕೇಸ್​​​​ನಲ್ಲಿ ಬಾರದಂತೆ ತನಿಖೆ ಮಾಡಲು ಸಿಐಡಿಗೆ ವಹಿಸಲಾಗಿದೆ. ಪಿಎಸ್‌ಐ ಕೇಸ್ ತನಿಖೆ‌ ಮಾಡಿದ ತಂಡವೇ ಈ ಕೇಸ್ ತನಿಖೆ ಮಾಡುತ್ತದೆ. ತನಿಖೆ ಪ್ರಾಮಾಣಿಕವಾಗಿ ನಡೆದು ತಪ್ಪಿತಸ್ಥರಿಗೆ ಕ್ರಮ ಆಗುವಂತೆ ಕ್ರಮ ಆಗಬೇಕು ಅಂತ ಸೂಚನೆ ನೀಡಿದ್ದೇವೆ ಎಂದರು. ಸ್ಯಾಂಟ್ರೋ ರವಿ ಮೇಲೆ ಅತ್ಯಾಚಾರ, ಕೊಲೆ, ಕಿರುಕುಳ, ವರದಕ್ಷಿಣೆ ಸೇರಿ ಅನೇಕ ಪ್ರಕರಣಗಳು ಇವೆ. ಇದರ ಸಂಪೂರ್ಣ ತನಿಖೆ ಆಗಲಿದೆ. ಸಾರ್ವಜನಿಕವಾಗಿ ಚರ್ಚೆ ಆಗಿರುವ ಪ್ರಕರಣ ಇದು. ಇದರ ಹಿಂದೆ ಯಾರೆಲ್ಲಾ ಇದ್ದಾರೆ ಅಂತ ಗೊತ್ತಾಗಬೇಕು. ಯಾರೆಲ್ಲ ಸ್ಯಾಂಟ್ರೋ ರವಿ ಜೊತೆ ಇದ್ದರೋ ಅವರ ಮುಖವಾಡ ಕಳಚಿ ಹೊರಗೆ ತೆಗೆಯಬೇಕು. 20 ವರ್ಷದ ಹಿಂದೆ ಯಾರ ಜೊತೆ ರವಿ ಸಂಬಂಧ ಇಟ್ಟುಕೊಂಡಿದ್ದ ಅನ್ನೋದು ಜನರಿಗೆ ಗೊತ್ತಾಗಬೇಕು. ಹೀಗಾಗಿ ಸಿಐಡಿ ತನಿಖೆಗೆ ವಹಿಸಲಾಗಿದೆ. ಒಳ್ಳೆ ರೀತಿ ತನಿಖೆ ಆಗಬೇಕು ಅಂತ ಸಿಐಡಿಗೆ ವಹಿಸಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ನಿಮ್ಮ ಬಾಯಿ ತೆವಲಿಗೆ ಮನಸ್ಸಿಗೆ ಬಂದಂತೆ ಮಾತನಾಡಬೇಡಿ: ನಾರಾಯಣ ಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ಮುಂದಿನ ಸುದ್ದಿ
Show comments