Select Your Language

Notifications

webdunia
webdunia
webdunia
webdunia

ಎಂಎಲ್ಸಿ ವಿಜಯ ಸಿಂಗ್ ವಿರುದ್ಧ ಭಾರೀ ಪ್ರತಿಭಟನೆ; ಚಪ್ಪಲಿ ಹಾರ, ಪ್ರತಿಕೃತಿ ದಹನ

ಎಂಎಲ್ಸಿ ವಿಜಯ ಸಿಂಗ್ ವಿರುದ್ಧ ಭಾರೀ ಪ್ರತಿಭಟನೆ; ಚಪ್ಪಲಿ ಹಾರ, ಪ್ರತಿಕೃತಿ ದಹನ
ಬೀದರ್ , ಮಂಗಳವಾರ, 21 ಮೇ 2019 (11:23 IST)
ಬೀದರ್​​ ಜಿಲ್ಲೆಯಲ್ಲಿ ಎಮ್​ ಎಲ್ ​ಸಿ ವಿಜಯ್​ ಸಿಂಗ್ ವಿರುದ್ಧ ಭಾರೀ ಪ್ರತಿಭಟನೆ ವ್ಯಕ್ತವಾಗಿದೆ.

ವಿಜಯ್ ಸಿಂಗ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲ್ಲೆಯಲ್ಲಿ ಔರಾದ್​ ಪಟ್ಟಣ ಪಂಚಾಯತಿಯ ಟಿಕೆಟ್​ ಹಂಚಿಕೆ ವಿಚಾರದಲ್ಲಿ ಮಾತಿನ ಚಕಮಕಿ ನಡೆದಿತ್ತು.  ಈ ವೇಳೆ ವಿಜಯ್​ ಸಿಂಗ್, ಔರಾದ್​ ವಿಧಾನಸಭೆ ಕ್ಷೇತ್ರದ ಪರಾಜಿತ ಕಾಂಗ್ರೆಸ್​ ಅಭ್ಯರ್ಥಿ ವಿಜಯಕುಮಾರ್ ಕೌಡಿಯಾಳ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಪಾಳ ಮೋಕ್ಷ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಎಸ್ಪಿಗೆ ದೂರು ನೀಡಲಾಗಿತ್ತು.

ಈ ಹಿನ್ನೆಲ್ಲೆಯಲ್ಲಿ ಹಿಂದುಳಿದ ವರ್ಗದ ನಾಯಕ ವಿಜಯಕುಮಾರ್ ಕೌಡಿಯಾಳರನ್ನ ವಿಜಯ್​ ಸಿಂಗ್ ಅವಮಾನಿಸಿದ್ದಾರೆ. ಅವರಿಗೆ ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೊಳ್ಳಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಸಮಿತಿ ಬೀದರ್​ ನಗರದಲ್ಲಿ ಬೃಹತ್​ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು.

ನಗರದ ಅಂಬೇಡ್ಕರ್​ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೂ ಪ್ರತಿಭಟನೆ ನಡೆಸಿ ವಿಜಯ್ ಸಿಂಗ್ ​ ವಿರುದ್ಧ ದಿಕ್ಕಾರ ಕೂಗಿ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.




Share this Story:

Follow Webdunia kannada

ಮುಂದಿನ ಸುದ್ದಿ

ನೂರಾರು ಸಮಾಧಿ ಧ್ವಂಸ ಮಾಡಿದ್ಯಾರು?