Select Your Language

Notifications

webdunia
webdunia
webdunia
webdunia

ನಿರ್ಮಾಪಕರ ಸಂಘ: ಸಾಮೂಹಿಕ ರಾಜೀನಾಮೆಗೆ ನಿರ್ಧಾರ!

ನಿರ್ಮಾಪಕರ ಸಂಘ
ಬೆಂಗಳೂರು , ಶನಿವಾರ, 23 ಜುಲೈ 2016 (10:14 IST)
ಪರಭಾಷೆ ಚಿತ್ರವನ್ನು ಬೆಂಬಲಿಸಿರುವುದನ್ನು ವಿರೋಧಿಸಿ ನಿರ್ಮಾಪಕರ ಸಂಘಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ಸದಸ್ಯರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ನಗರದಲಿರುವ ತಮಿಳ ಮತದಾರರನ್ನು ಆಕರ್ಷಿಸುವ ಉದ್ದೇಶದಿಂದ ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಅವರು ರಜನಿಕಾಂತ್ ಅಭಿನಯದ ಕಬಾಲಿ ಚಿತ್ರದ ಟಿಕೆಟ್‌ನ್ನು ತಮ್ಮ ಕ್ಷೇತ್ರದ ಮತದಾರರಿಗೆ ಹಂಚಿಕೆ ಮಾಡಿರುವುದನ್ನು ವಿರೋಧಿಸಿ ನಿರ್ಮಾಪಕ ಸಂಘಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ಸದಸ್ಯರು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
 
ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಅವರ ನಡೆ ಖಂಡಿಸಿರುವ ಸಾ.ರಾ.ಗೋವಿಂದು, ಎಂ.ಎನ್‌.ಸುರೇಶ್, ಕೆ.ಎಂ.ವಿರೇಶ್, ಎ.ಗಣೇಶ್, ಪ್ರವೀಣ, ದಿನೇಶ್ ಗಾಂಧಿ ಹಾಗೂ ಮಾಣಿಕ್ ಚಂದ್ ಅವರು ನಿರ್ಮಾಪಕರ ಸಂಘದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು!