Webdunia - Bharat's app for daily news and videos

Install App

ರೈತನ ಮೇಲೆ ಅಧಿಕಾರಿಗಳಿಂದ ಸಾಮೂಹಿಕ ಹಲ್ಲೆ: ಐವರ ಮೇಲೆ ಎಫ್ ಐ ಆರ್

Webdunia
ಬುಧವಾರ, 31 ಅಕ್ಟೋಬರ್ 2018 (15:31 IST)
ಜಮೀನೊಂದರ ಸ್ಕೇಚ್ ತಯಾರಿಸಿಕೊಡಲು ವಿಳಂಬ ಮಾಡುತ್ತಿರುವ ಸರ್ವೆ‌ ಅಧಿಕಾರಿಗಳನ್ನ ಪ್ರಶ್ನಿಸಿದ ರೈತನ ಮೇಲೆ ಸರ್ವೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.

ತುಮಕೂರು ಜಿಲ್ಲೆ ಕುಣಿಗಲ್  ನ ತಾಲೂಕಾ ಸರ್ವೆ ಇಲಾಖೆ ಯಲ್ಲಿ ಅಧಿಕಾರಿಗಳು ದರ್ಪ ತೋರಿದ್ದಾರೆ.  ಬೋರೇಗೌಡ ಎಂಬುವವರು ತಮ್ಮ ಜಮೀನಿನ ಸ್ಕೇಚ್ ತಯಾರಿಸಿ ಕೊಡಲು ಅರ್ಜಿ ಹಾಕಿ ಒಂದು ವರ್ಷ ಕಳೆದಿದೆ. ಬೋರೆಗೌಡ ತನ್ನ ತಮ್ಮನ ಮಗ ಚಿಕ್ಕಣ್ಣ ಗೌಡರ ಜೊತೆ ಬಂದು ಪ್ರಶ್ನಿಸಿದ್ದಾರೆ. ಅಧಿಕಾರಿಗಳು ಇಲ್ಲಸಲ್ಲದ ಸಬೂಬು ಹೇಳಿದ್ದಾರೆ.

ಆಗ ಚಿಕ್ಕಣ್ಣಗೌಡ ಮೇಲಧಿಕಾರಿಗೆ ದೂರು ಕೊಡುವುದಾಗಿ ಹೇಳಿದ್ದಾನೆ. ಅಷ್ಟಕ್ಕೆ ಸಿಟ್ಟಿಗೆದ್ದ‌ ಸರ್ವೆ ಅಧಿಕಾರಿ ಸೇರಿ ಇತರ ಸಿಬ್ಬಂದಿಗಳೂ ಚಿಕ್ಕಣ್ಣ ಗೌಡನ ಮೇಲೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲಿದ್ದ ಇತರ ರೈತರು ಬಿಡಿಸಲು ಬಂದರೂ ಕ್ಯಾರೇ ಅನ್ನದೇ ಹಲ್ಲೆ ನಡೆಸಿದ್ದಾರೆ.  ಸರ್ವೆ ಅಧಿಕಾರಿ ಮಲ್ಲಿಕಾರ್ಜುನ್, ಸಿಬ್ಬಂದಿಗಳಾದ ನಂದೀಶ್, ರವಿಪ್ರಕಾಶ್, ಜಗದೀಶ್ ಹಾಗೂ ಪ್ರಕಾಶ್ ವಿರುದ್ದ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments