Webdunia - Bharat's app for daily news and videos

Install App

ಸಂಸದೆ ಸುಮಲತಾಗೆ ಭಾರೀ ಅವಮಾನ: ಕಾಂಗ್ರೆಸ್ ಮುಖಂಡರಿಂದ ಕಚೇರಿಗೆ ಮುತ್ತಿಗೆ

Webdunia
ಗುರುವಾರ, 27 ಜೂನ್ 2019 (19:39 IST)
ಮಂಡ್ಯ ಜಿಲ್ಲೆಯ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಅವಮಾನ ಮಾಡಿದ್ದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಹಸೀಲ್ದಾರ್ ಶಿವಮೂರ್ತಿ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಡಪ್ರಭು ಕೆಂಪೇಗೌಡರ ಜಯಂತಿಯ ಕಾರ್ಯಕ್ರಮಕ್ಕೆ ಸಂಸದೆ ಸುಮಲತಾ ಅವರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಕೈ ಬಿಟ್ಟು ಕಾರ್ಯಕ್ರಮಕ್ಕೆ ಆಹ್ವಾನಿಸದೆ ಸಂಸದರಿಗೆ ತಹಶಿಲ್ದಾರ್ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ತಹಸೀಲ್ದಾರ್ ಕಛೇರಿಗೆ ಮುತ್ತಿಗೆ ಹಾಕಿದ್ದಾರೆ.

ತಹಸೀಲ್ದಾರ್ ಗೆ ಬೆವರು ಇಳಿಸಿದ್ದಾರೆ ಕಾಂಗ್ರೆಸ್ ಮುಖಂಡರು. ಅಧಿಕಾರದ ಮದದಿಂದ ತಹಸೀಲ್ದಾರ್ ವರ್ತಿಸುತ್ತಿದ್ದಾರೆ ಎಂಬ ಆರೋಪ ಮಾಡಿದ್ದಾರೆ ಪ್ರತಿಭಟನಾಕಾರರು.

ತಹಸೀಲ್ದಾರ್ ವರ್ಗಾವಣೆಗೆ ಒತ್ತಾಯವನ್ನೂ ಮಾಡಿದ್ದಾರೆ. ಇವರ ವಿರುದ್ಧ ಶಿಸ್ತು ಕ್ರಮಕ್ಕೆ ಡಿಸಿಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಪ್ರತಿಭಟನೆಗೆ ಹೆದರಿದ ತಹಸೀಲ್ದಾರ್, ಮುಖಂಡರಲ್ಲಿ ಕ್ಷಮೆಯಾಚಿಸಿದ್ದಾರೆ. ಪುರಸಭೆ ಸದಸ್ಯರಾದ ಕೆ.ಬಿ.ಮಹೇಶ್, ರವೀಂದ್ರ ಬಾಬು, ಪ್ರೇಮ ಕುಮಾರ್, ಕೆ.ಸಿ.ಮಂಜುನಾಥ್ ಸೇರಿದಂತೆ ಹಲವರು ಭಾಗಿಯಾಗಿದ್ದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments