Webdunia - Bharat's app for daily news and videos

Install App

ಮುಸ್ಲಿಂ ಮುಖಂಡರ ಪ್ರಚೋದನಕಾರೀ ಹೇಳಿಕೆ: ಬಿಸಿ ರೋಡ್ ನಲ್ಲಿ ಹಿಂದೂಗಳ ಪ್ರತಿಭಟನೆ

Krishnaveni K
ಸೋಮವಾರ, 16 ಸೆಪ್ಟಂಬರ್ 2024 (10:31 IST)
ಬಂಟ್ವಾಳ: ಈದ್ ಮಿಲಾದ್ ಮೆರವಣಿಗೆ ಬೆನ್ನಲ್ಲೇ ಕೆಲವು ಮುಸ್ಲಿಂ ಮುಖಂಡರ ಪ್ರಚೋದನಕಾರೀ ಹೇಳಿಕೆ ಹಿನ್ನಲೆಯಲ್ಲಿ ಬಿಸಿ ರೋಡ್ ನಲ್ಲಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಪ್ರಕ್ಷುಬ್ಧ ವಾತಾವರಣವಿದೆ.

ಇಂದು ಈದ್ ಮೆರವಣಿಗೆಯೂ ಇರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಮೊನ್ನೆಯಷ್ಟೇ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಸಂದರ್ಭದಲ್ಲಿ ಕೆಲವು ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದರಿಂದ ಭಾರೀ ಗಲಾಟೆಯಾಗಿತ್ತು.

ಬಿಸಿ ರೋಡ್ ಮೊದಲೇ ಸೂಕ್ಷ್ಮ ಪ್ರದೇಶ. ಇದೀಗ ಈದ್ ಮೆರವಣಿಗೆಗೆ ಮೊದಲು ಮುಸ್ಲಿಂ ಮುಖಂಡರ ಪ್ರಚೋದನಕಾರೀ ಹೇಳಿಕೆ ಹಿಂದೂ ಕಾರ್ಯಕರ್ತರನ್ನು ಕೆರಳಿಸಿದೆ. ಈಗಾಗಲೇ ವಿಎಚ್ ಪಿ ನಾಯಕ ಶರಣ್ ಪಂಪ್ ವೆಲ್ ನಾವೂ ಈದ್ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದರೆ ಹೇಗಿರುತ್ತದೆ ಎಂದಿದ್ದರು.

ಈ ಹಿನ್ನಲೆಯಲ್ಲಿ ಇಂದು ಮತ್ತೊಮ್ಮೆ ಕೋಮುಗಲಭೆಯಾಗದಂತೆ ಪೊಲೀಸರು ಭಾರೀ ಭದ್ರತೆ ಏರ್ಪಡಿಸಿದ್ದಾರೆ. ಹಾಗಿದ್ದರೂ ಮುಸ್ಲಿಂ ಮುಖಂಡರ ಹೇಳಿಕೆ ಖಂಡಿಸಿ ಇಂದು ಹಿಂದೂ ಸಂಘಟನೆಗಳು ಬಿಸಿ ರೋಡ್ ಚಲೋ ಹೋರಾಟಕ್ಕೆ ಕರೆನೀಡಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಪ್ರಯತ್ನ ನಡೆಸಿದ್ದಾರೆ. ಇದೀಗ ಬಿಸಿ ರೋಡ್ ಬೂದಿ ಮುಚ್ಚಿದ ಕೆಂಡದಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments