Select Your Language

Notifications

webdunia
webdunia
webdunia
webdunia

ರಮೇಶ್ ಜಾರಕಿಹೊಳಿ ಬಂಡಾಯ ಶಮನ ಮಾಡಲು ಹೈಕಮಾಂಡ್ ನಿಂದ ಮಾಸ್ಟರ್ ಪ್ಲಾನ್

ರಮೇಶ್ ಜಾರಕಿಹೊಳಿ ಬಂಡಾಯ ಶಮನ ಮಾಡಲು ಹೈಕಮಾಂಡ್ ನಿಂದ ಮಾಸ್ಟರ್ ಪ್ಲಾನ್
ಬೆಂಗಳೂರು , ಸೋಮವಾರ, 24 ಡಿಸೆಂಬರ್ 2018 (14:12 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಬಂಡಾಯ ಶಮನ ಮಾಡಲು ಹೈಕಮಾಂಡ್ ಮಾಸ್ಟರ್ ಪ್ಲಾನ್ ಮಾಡಿದ್ದು, ಅದಕ್ಕಾಗಿ  ರಮೇಶ್ ಜಾರಕಿಹೊಳಿಗೆ ಬಂಪರ್ ಆಫರ್ ನೀಡಲು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.


ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಅಸಮಾಧಾನಗೊಂಡಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ರಮೇಶ್ ಜಾರಕಿಹೊಳಿ ಬಂಡಾಯವೆಳಬಹುದು ಎಂಬ ಕಾರಣಕ್ಕೆ ಅದನ್ನು ಶಮನ ಮಾಡಲು ಹೈಕಮಾಂಡ್ ಎಂಟ್ರಿಯಾಗಿದ್ದಾರೆ.


ಜಾರಕಿಹೊಳಿ ತಣ್ಣಗಾದರೆ ಬಂಡಾಯಕ್ಕೆ ಬ್ರೇಕ್ ಹಾಕಬಹುದು ಎಂಬುದು ಹೈಕಮಾಂಡ್  ಪ್ಲಾನ್. ಇಂದು ಸಂಜೆ ಅಥವಾ ನಾಳೆ ಜಾರಕಿಹೊಳಿ ಜೊತೆ ಉಸ್ತುವಾರಿ ವೇಣುಗೋಪಾಲ್ ಚರ್ಚೆ ನಡೆಸಲಿದ್ದು, ಜಾರಕಿಹೊಳಿ ರಾಷ್ಟ್ರ ರಾಜಕಾರಣಕ್ಕೆ ಹೋಗಲು ಒಪ್ಪಿದರೆ ಎಐಸಿಸಿ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲು ಚಿಂತನೆ ನಡೆಸಿದೆ. ಅಲ್ಲದೇ ಬೆಳಗಾವಿ ಅಥವಾ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ರಮೇಶ್ ಕಣಕ್ಕಿಳಿಸಲು ನಿರ್ಧರಿಸಿದ್ದು, ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿಗೆ ಗೋಕಾಕ್ ಕ್ಷೇತ್ರದಿಂದ ಟಿಕೆಟ್ ನೀಡಲು ಚಿಂತನೆ ನಡೆಸಲಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸೆಕ್ಸ್ ವಿಡಿಯೋದಿಂದ ಉದ್ರೇಕಗೊಂಡ 15 ವರ್ಷದ ಬಾಲಕ ಎಸಗಿದ ಕೃತ್ಯದ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ