Select Your Language

Notifications

webdunia
webdunia
webdunia
webdunia

ರಾಜ್ಯಾದ್ಯಂತ ಸ್ಥಳೀಯ ಯೋಜನಾ ಪ್ರಾಧಿಕಾರಗಳ ಮಾಸ್ಟರ್ ಪ್ಲಾನ್

ರಾಜ್ಯಾದ್ಯಂತ ಸ್ಥಳೀಯ ಯೋಜನಾ ಪ್ರಾಧಿಕಾರಗಳ ಮಾಸ್ಟರ್ ಪ್ಲಾನ್
bangalore , ಭಾನುವಾರ, 28 ನವೆಂಬರ್ 2021 (20:12 IST)
ಬೆಂಗಳೂರು: ರಾಜ್ಯಾದ್ಯಂತ ಸ್ಥಳೀಯ ಯೋಜನಾ ಪ್ರಾಧಿಕಾರಗಳ ಮಾಸ್ಟರ್ ಪ್ಲಾನ್ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಭೂ ಪರಿವರ್ತನೆ, ಭೂಮಿ ಬಳಕೆಯ ಬದಲಾವಣೆಗೆ ಸಂಬಂಧಿಸಿದ ಕಾನೂನುಗಳನ್ನು ವ್ಯಾಖ್ಯಾನಿಸಿರುವ ಹೈಕೋರ್ಟ್, 1964ರ ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿಯಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸಿದ ನಂತರವೂ, ಕರ್ನಾಟಕ ಪಟ್ಟಣ ಮತ್ತು ಗ್ರಾಮ ಯೋಜನೆ ಕಾಯ್ದೆ-1961 ಅಡಿ ಸಂಬಂಧಿಸಿದ ಯೋಜನಾ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿದೆ.
ಬಡವಾಣೆ ಯೋಜನೆಯನ್ನು ಅನುಮೋದಿಸದ ಮಂಡ್ಯ ಅಭಿವೃದ್ಧಿ ಯೋಜನಾ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ರಾಜ್ಯ ಮಾಂಡವ್ಯ ಗೃಹ ನಿರ್ಮಾಣ ಸಹಕಾರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.
ಪೀಠ ತನ್ನ ಆದೇಶದಲ್ಲಿ, ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 95ರ ಅಡಿಯಲ್ಲಿ ಜಿಲ್ಲಾಧಿಕಾರಿಯಿಂದ ಭೂ ಪರಿವರ್ತನೆಗೆ ಅನುಮತಿ ಪಡೆದುಕೊಂಡಾಕ್ಷಣ ಕೆಟಿಸಿಪಿ ಕಾಯ್ದೆಯ ಸೆಕ್ಷನ್ 14ರ ಅಡಿಯಲ್ಲಿ ಭೂ ಬಳಕೆಯ ಬದಲಾವಣೆಗೂ ಅನುಮತಿ ಸಿಕ್ಕಿದೆ ಅಥವಾ ತಂತಾನೇ ಬದಲಾವಣೆ ಆಗಿದೆ ಎಂದು ಅರ್ಥವಲ್ಲ. ಭೂಮಿ ಇನ್ನೂ ಯೋಜನಾ ಪ್ರಾಧಿಕಾರದ ಮಾಸ್ಟರ್ ಪ್ಲಾನ್ ವ್ಯಾಪ್ತಿಯಲ್ಲೇ ಇದೆ ಎಂದು ಅರ್ಥ. ಹೀಗಾಗಿ ಜಿಲ್ಲಾಧಿಕಾರಿಯಿಂದ ಭೂ ಪರಿವರ್ತನೆಗೆ ಅನುಮೋದನೆ ಸಿಕ್ಕಿದ್ದರೂ ಯೋಜನಾ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುತ್ತಿದ್ದರೆ, ಪ್ರಾಧಿಕಾರದಿಂದಲೂ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಅಭಿಪ್ರಾಯಪಟ್ಟಿದೆ.

Share this Story:

Follow Webdunia kannada

ಮುಂದಿನ ಸುದ್ದಿ

15 ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ನಡೆದ ಎಸಿಬಿ ದಾಳಿ ಸಂಬಂಧ ಅಕ್ರಮ ಆಸ್ತಿ ಬಗೆದಷ್ಟು ಬಯಲು