ಮಾತಾ ಮಾಣಿಕೇಶ್ವರಿ ಕೋಟಿಲಿಂಗದಲ್ಲಿ ಲೀನ

Webdunia
ಭಾನುವಾರ, 8 ಮಾರ್ಚ್ 2020 (13:00 IST)
ದೇಶದ ಕೋಟ್ಯಾಂತರ ಭಕ್ತರ ಆರಾಧ್ಯ ದೈವ ಮಾತಾ ಮಾಣಿಕೇಶ್ವರಿ ಅಮ್ಮನವರು ಲಿಂಗೈಕ್ಯರಾಗಿದ್ದಾರೆ.

ಅಹಿಂಸೆಯೇ ಪರಮ ಧರ್ಮ ಎಂದು ಸಾರಿದ, ಕೋಟ್ಯಾಂತರ ಭಕ್ತರ ಆರಾಧ್ಯ ದೈವ ಮಾತಾ ಮಾಣಿಕೇಶ್ವರಿ ಅಮ್ಮನವರು ಶನಿವಾರ ರಾತ್ರಿ 8.27 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ.

ಯಾದಗಿರಿಯ ಯಾನಾಗುಂದಿಯ ಮಾಣಿಕ್ಯಗಿರಿಯಲ್ಲಿ ಸತತ 66 ವರ್ಷಗಳಿಂದ ಧ್ಯಾನಸ್ಥರಾಗಿದ್ದ ಮಾತಾ ಮಾಣೀಕೇಶ್ವರಿ ಅಮ್ಮನವರು ತಮ್ಮ 87ನೇ ವರ್ಷದ ಪಯಣ ಮುಗಿಸಿ ಕಣ್ಮರೆಯಾಗಿದ್ದಾರೆ.

ಮಾತಾ ಮಾಣಿಕೇಶ್ವರಿ ಅಮ್ಮನವರು 1933 ರಲ್ಲಿ ಸೇಡಂ ತಾಲೂಕಿನ ಮಲ್ಲಾಬಾದ ಎಂಬ ಗ್ರಾಮದಲ್ಲಿ ಜನಿಸಿ, ತಮ್ಮ 16 ನೇ ವಯಸ್ಸಿಗೆ ಯಾನಾಗುಂದಿಗೆ ಬಂದು ತಪಸ್ಸು, ಧ್ಯಾನದ ಮೂಲಕ ಅಧ್ಯಾತ್ಮ ಲೋಕದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇತ್ತೀಚೆಗೆ ತೀರಾ ಅನಾರೋಗ್ಯಕ್ಕೆ ಈಡಾಗಿದ್ದ ಅವರನ್ನು ಚಿಕಿತ್ಸೆ ನೀಡಿ ಗುಣಪಡಿಸಲಾಗಿತ್ತು.

ತಮ್ಮ ಹುಟ್ಟು ದಿನ, ಮಹಾಶಿವರಾತ್ರಿಯಂದು ಲಕ್ಷಾಂತರ ಭಕ್ತರಿಗೆ ದರ್ಶನ ನೀಡುತ್ತಿದ್ದ ಮಾತಾ ಮಾಣಿಕೇಶ್ವರಿ ಕುರಿ, ಕೋಳಿ, ಹಸುಗಳನ್ನು ಕೊಲ್ಲದೆ ಅಹಿಂಸೆಯನ್ನು ಪ್ರತಿಪಾದಿಸುವಂತೆ ಸಂದೇಶ ಸಾರುತ್ತಿದ್ದರು. ಆಶ್ರಮಕ್ಕೆ ಬರುವ ಭಕ್ತರು ಅನ್ನಪ್ರಸಾದ ಸ್ವೀಕರಿಸುವುದಕ್ಕೂ ಮುಂಚೆ ಅಹಿಂಸೆಯ ತತ್ವ ಬೋಧನೆ ನಡೆಯುತ್ತಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಕ್ಸ್ ಪ್ರೆಸ್ ರೈಲು ಚೇಸ್ ಮಾಡಿ ಒಳಗಿದ್ದ ವ್ಯಕ್ತಿಯನ್ನು ಎಳೆದುಕೊಂಡು ಹೋದ ಚಿರತೆ: ಎದೆ ಝಲ್ಲೆನಿಸುವ ವಿಡಿಯೋ

ಯಾರು ಏನೇ ಹೇಳಿದ್ರೂ ಇದೊಂದು ಕಾರಣಕ್ಕೆ ರಾಷ್ಟ್ರ ರಾಜಕಾರಣ ಬೇಡ ಅಂತಾರೆ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಈ ಒಂದು ಕೆಲಸ ಮಾಡಲಿದ್ದಾರೆ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಳಿ ರಾಜೀನಾಮೆ ಕೇಳಲು ರಾಹುಲ್ ಗಾಂಧಿ ಮನವೊಲಿಸಿದ ವ್ಯಕ್ತಿ ಯಾರೆಂದು ಬಯಲು

ಸಿಎಂ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಬೆನ್ನಲ್ಲೇ ಇಂದು ಸಿದ್ದರಾಮಯ್ಯ, ಡಿಕೆಶಿ ಒಂದೇ ವೇದಿಕೆಯಲ್ಲಿ

ಮುಂದಿನ ಸುದ್ದಿ
Show comments