ಸರ್ಕಾರಿ ಗೌರವದೊಂದಿಗೆ ಮಾತಾ ಮಾಣಿಕೇಶ್ವರಿ ದೇವಿ ಅಂತ್ಯಸಂಸ್ಕಾರ

Webdunia
ಮಂಗಳವಾರ, 10 ಮಾರ್ಚ್ 2020 (16:08 IST)
ಲಕ್ಷಾಂತರ ಭಕ್ತರ ಆರಾಧ್ಯ ದೈವರಾಗಿದ್ದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯ ಶ್ರೀ ಶ್ರೀ ಶ್ರೀ ರೂಪರಹಿತ ಅಹಿಂಸಾ ಯೋಗೀಶ್ವರ ವೀರಧರ್ಮಜ ಮಾತಾ ಮಾಣಿಕೇಶ್ವರಿ ಅವರ ಅಂತ್ಯಸಂಸ್ಕಾರವು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಯಾನಾಗುಂದಿಯ ದೇವಸ್ಥಾನದ ಆವರಣದಲ್ಲಿ ಭಕ್ತ ಸಮೂಹದ ಸಾಗರದ ಮಧ್ಯೆ ಶೈವ ಧರ್ಮದ ಪ್ರಕಾರ ಶಾಸ್ತ್ರೋಕ್ತವಾಗಿ ನಡೆಯಿತು.

ನಾಡಿನ ಹರಗುರುಚರ ಮೂರ್ತಿಗಳ ಸಮ್ಮುಖದಲ್ಲಿ ಮತ್ತು ಶ್ರೀಶೈಲದ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಅಂತ್ಯಸಂಸ್ಕಾರದ ವಿಧಿ-ವಿಧಾನಗಳು ನೆರವೇರಿಸಲಾಯಿತು. ಸೂರ್ಯನಂದಿ ಬೆಟ್ಟದ ವೀರ ಧರ್ಮಜ ವೀರವಿರಾಗಿಣಿ ಮಾತೆ ಮಾಣಿಕೇಶ್ವರಿ ಅವರನ್ನು ದೇವಸ್ಥಾನದ ಒಳಗಡೆ ಇರುವ ಶಿಲಾ ಮಂಟಪದ ನಾಗ ಸಿಂಹಾಸನ 12 ಅಡಿ ಆಳದ ಗುಹೆಯಲ್ಲಿರುವ 5 ಅಡಿ ಎತ್ತರದ ಶಿವಲಿಂಗದಲ್ಲಿ ಭಕ್ತರ ಪಾಲಿನ “ಅಮ್ಮ” ಲೀನರಾದರು.

ಅನ್ನ, ನೀರು ತ್ಯಜಿಸಿ ಧರ್ಮಕಾರ್ಯ, ತಪ್ಪಸ್ಸು ಮೂಲಕ ಮಹಾಯೋಗಿನಿ ಎನಿಸಿಕೊಂಡಿದ್ದ ಮಾತೆ ಮಾಣಿಕೇಶ್ವರಿಯವರು ಅನೇಕ ಪವಾಡಕ್ಕೆ ಕಾರಣರಾಗಿದ್ದವರು. ವರ್ಷದಲ್ಲಿ ಎರಡು ಬಾರಿ ಮಹಾಶಿವರಾತ್ರಿ ಮತ್ತು ಗುರು ಪೂರ್ಣಿಮೆಯಂದು ಮಾತ್ರ ಸಾರ್ವಜನಿಕ ದರ್ಶನ ನೀಡುತ್ತಿದ್ದ ಅವರು ಅಹಿಂಸೆ ಮತು ಪ್ರಾಣಿ ಬಲಿ ಮಾಡದಂತೆ ಭಕ್ತರಿಗೆ ಕರೆ ನೀಡುತ್ತಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಮುಂದಿನ ಸುದ್ದಿ
Show comments