Webdunia - Bharat's app for daily news and videos

Install App

ಸರ್ಕಾರಿ ಗೌರವದೊಂದಿಗೆ ಮಾತಾ ಮಾಣಿಕೇಶ್ವರಿ ದೇವಿ ಅಂತ್ಯಸಂಸ್ಕಾರ

Webdunia
ಮಂಗಳವಾರ, 10 ಮಾರ್ಚ್ 2020 (16:08 IST)
ಲಕ್ಷಾಂತರ ಭಕ್ತರ ಆರಾಧ್ಯ ದೈವರಾಗಿದ್ದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯ ಶ್ರೀ ಶ್ರೀ ಶ್ರೀ ರೂಪರಹಿತ ಅಹಿಂಸಾ ಯೋಗೀಶ್ವರ ವೀರಧರ್ಮಜ ಮಾತಾ ಮಾಣಿಕೇಶ್ವರಿ ಅವರ ಅಂತ್ಯಸಂಸ್ಕಾರವು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.

ಯಾನಾಗುಂದಿಯ ದೇವಸ್ಥಾನದ ಆವರಣದಲ್ಲಿ ಭಕ್ತ ಸಮೂಹದ ಸಾಗರದ ಮಧ್ಯೆ ಶೈವ ಧರ್ಮದ ಪ್ರಕಾರ ಶಾಸ್ತ್ರೋಕ್ತವಾಗಿ ನಡೆಯಿತು.

ನಾಡಿನ ಹರಗುರುಚರ ಮೂರ್ತಿಗಳ ಸಮ್ಮುಖದಲ್ಲಿ ಮತ್ತು ಶ್ರೀಶೈಲದ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಅಂತ್ಯಸಂಸ್ಕಾರದ ವಿಧಿ-ವಿಧಾನಗಳು ನೆರವೇರಿಸಲಾಯಿತು. ಸೂರ್ಯನಂದಿ ಬೆಟ್ಟದ ವೀರ ಧರ್ಮಜ ವೀರವಿರಾಗಿಣಿ ಮಾತೆ ಮಾಣಿಕೇಶ್ವರಿ ಅವರನ್ನು ದೇವಸ್ಥಾನದ ಒಳಗಡೆ ಇರುವ ಶಿಲಾ ಮಂಟಪದ ನಾಗ ಸಿಂಹಾಸನ 12 ಅಡಿ ಆಳದ ಗುಹೆಯಲ್ಲಿರುವ 5 ಅಡಿ ಎತ್ತರದ ಶಿವಲಿಂಗದಲ್ಲಿ ಭಕ್ತರ ಪಾಲಿನ “ಅಮ್ಮ” ಲೀನರಾದರು.

ಅನ್ನ, ನೀರು ತ್ಯಜಿಸಿ ಧರ್ಮಕಾರ್ಯ, ತಪ್ಪಸ್ಸು ಮೂಲಕ ಮಹಾಯೋಗಿನಿ ಎನಿಸಿಕೊಂಡಿದ್ದ ಮಾತೆ ಮಾಣಿಕೇಶ್ವರಿಯವರು ಅನೇಕ ಪವಾಡಕ್ಕೆ ಕಾರಣರಾಗಿದ್ದವರು. ವರ್ಷದಲ್ಲಿ ಎರಡು ಬಾರಿ ಮಹಾಶಿವರಾತ್ರಿ ಮತ್ತು ಗುರು ಪೂರ್ಣಿಮೆಯಂದು ಮಾತ್ರ ಸಾರ್ವಜನಿಕ ದರ್ಶನ ನೀಡುತ್ತಿದ್ದ ಅವರು ಅಹಿಂಸೆ ಮತು ಪ್ರಾಣಿ ಬಲಿ ಮಾಡದಂತೆ ಭಕ್ತರಿಗೆ ಕರೆ ನೀಡುತ್ತಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments