ವೈಚಾರಿಕ ಸಹಿಸಿಕೊಳ್ಳದಿರುವುದು ಶೋಚನೀಯ: ಮಾತೆ ಮಹಾದೇವಿ

Webdunia
ಬುಧವಾರ, 6 ಸೆಪ್ಟಂಬರ್ 2017 (15:33 IST)
ಕಲಬುರ್ಗಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಘೋರ ಅನ್ಯಾಯ. ವಿಚಾರವಾದ, ವೈಚಾರಿಕವನ್ನು ಸಹಿಸಿಕೊಳ್ಳದಿರುವುದು ಶೋಚನೀಯ ಸಂಗತಿ. ನೇರ, ದಿಟ್ಟ, ನಿಸ್ವಾರ್ಥವಿರುವ ಇಂತಹ ವ್ಯಕ್ತಿಗಳ ಬಗ್ಗೆ ವಿರೋಧಿ ಮನೋಭಾವ ಹೊಂದಿರುವುದು ಖಂಡನೀಯ ಎಂದು ಮಾತೆ ಮಹಾದೇವಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗಿಂತ ಎತ್ತರದಲ್ಲಿ ಕೂರುತ್ತಿದ್ದ ಪಂಚಾಚಾರ್ಯರಿಗೆ ಈಗ ದುರಂಹಕಾರ ಕಡಿಮೆಯಾಗಿದೆ. ಶಿವಯೋಗ ಮಂದಿರ ಸಮಾವೇಶದಲ್ಲಿ ಎಲ್ಲರ ಸಮನಾಗಿ ಕುಳಿತು ಸೌಜನ್ಯ ತೋರಿದಕ್ಕೆ ಸಂತಸವಾಗಿದೆ. ಮಾನವನ ಹೆಗಲಮೇಲೆ ಅಡ್ಡಪಲ್ಲಕ್ಕಿಯಲ್ಲಿ ಕುಳಿತುಕೊಳ್ಳದಿರಲು ನಿರ್ಧರಿಸಿರುವ ಪಂಚಾಚಾರ್ಯರ ನಿರ್ಣಯಕ್ಕೆ ಸ್ವಾಗತ. ಆದರೆ ವಿರಕ್ತರು ಪಂಚಾಚಾರ್ಯರೊಂದಿಗೆ ಸೇರಬಾರದು. ಆದರೆ ತತ್ವ ಭ್ರಷ್ಟತೆಯಿಂದ ಪಂಚಾಚಾರ್ಯದೊಂದಿಗೆ ಸೇರಿದ್ದಾರೆ ಎಂದು ಹೇಳಿದ್ದಾರೆ.

ಲಿಂಗಾಯತ ಸ್ವತಂತ್ರ ಧರ್ಮ ಬೇಡಿಕೆಯಲ್ಲಿ ಯಾವುದೇ ರಾಜಕೀಯ ಕೈವಾಡ ಇಲ್ಲ. ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿರುವ ಬಿಜೆಪಿಯೂ ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ನಡೆದಿರುವ ಹೋರಾಟದಲ್ಲಿ ಭಾಗವಹಿಸಿ ಅವರೂ ಲಾಭ ಪಡೆಯಲಿ. ಸೆಪ್ಟೆಂಬರ್ 10 ರಂದು ನಡೆಯಬೇಕಿದ್ದ ಕಲಬುರ್ಗಿ ಚಲೋ ಸೆ. 24ಕ್ಕೆ ಮುಂದೂಡಲಾಗಿದೆ. ಸುಮಾರು 3 ಲಕ್ಷ ಜನ ಸೇರಿಸುವ ನಿರೀಕ್ಷೆಯಿದ್ದು, ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಹೋರಾಟ ಚುರುಕುಗೊಳಿಸುವುದಾಗಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments