Publish Date: Tue, 07 Feb 2023 (12:51 IST)
Updated Date: Tue, 07 Feb 2023 (10:52 IST)
ಬಯೋ ಇಂಧನವಾದ ಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿ ನಿಲ್ಲುತ್ತದೆ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಬ್ಬು ಅರಿಯುವ ಘಟಕಗಳಿವೆ.
ರಾಜ್ಯದ ಯುವ ಉದ್ಯಮಿ ವಿಜಯ್ ನಿರಾಣಿ ಅವರು ದೇಶದಲ್ಲಿಯೇ ದೊಡ್ಡ ಪ್ರಮಾಣದ ಎಥೆನಾಲ್ ಉತ್ಪಾದನೆಯಲ್ಲಿ ನಿರತರಾಗಿದ್ದಾರೆ. ಭಾರತದ ಎಥೆನಾಲ್ ಉತ್ಪಾದನೆಯಲ್ಲಿ ಕರ್ನಾಟಕ ರಾಜ್ಯ ದೊಡ್ಡ ಕೊಡುಗೆ ನೀಡಲಿದೆ.
ಪ್ರಧಾನಿ ಮೋದಿಯವರ ಅಮೃತ ಕಾಲದಲ್ಲಿ ಇಂಧನ ಕ್ಷೇತ್ರದ ಅಭಿವೃದ್ಧಿಗಾಗಿ ನಮ್ಮ ಗುರಿ ಬಹಳ ಮಹತ್ವದ್ದಾಗಿದ್ದು, `ಗರಿಷ್ಠ ಇಂಧನ-ಕನಿಷ್ಠ ಮಾಲಿನ್ಯ ಎಂಬ ಘೋಷವಾಕ್ಯದ ಗುರಿಯನ್ನು ಸಾಧಿಸಲಾಗುವುದು ಎಂದು ಶಪಥ ಮಾಡಿದರು.