Webdunia - Bharat's app for daily news and videos

Install App

ರುದ್ರೇಶ್ ಹತ್ಯೆಯಲ್ಲಿ ಕೆಎಫ್‌ಡಿ, ಪಿಎಫ್‌ಐ ಕೈವಾಡ: ಯಡಿಯೂರಪ್ಪ ಶಂಕೆ

Webdunia
ಬುಧವಾರ, 19 ಅಕ್ಟೋಬರ್ 2016 (12:40 IST)
ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಹಿಂದೆ ಕೆಎಫ್‌ಡಿ ಹಾಗೂ ಪಿಎಫ್‌ಐ ಸಂಘಟನೆಯ ಕೈವಾಡವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶಂಕೆ ವ್ಯಕ್ತಪಡಿಸಿದ್ದಾರೆ. 
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ವಿರೋಧ ಪಕ್ಷವಾಗಿ ನಾವು ಹೋರಾಟ ಮಾಡಲೇ ಬೇಕಾಗಿದೆ ಎಂದು ಹೇಳಿದರು.
 
ಹಾಡುಹಗಲೇ ರುದ್ರೇಶ್ ಹತ್ಯೆ ನಡೆದು ಮೂರು ದಿನ ಕಳೆದರು ಆರೋಪಿಯನ್ನು ಬಂಧಿಸಿಲ್ಲ. ಆರೋಪಿಗಳನ್ನು ಬಂಧಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದರು. 
 
ಆರ್‌ಎಸ್ಎಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣವನ್ನು ಖಂಡಿಸಿ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments