ಡಿಕೆ ಶಿವಕುಮಾರ್ ಮನಸ್ಸಿನ ಇಚ್ಛೇ ಆದಷ್ಟು ಭೇಗ ಫಲಿಸಲಿ: ಪುತ್ತಿಗೆ ಸ್ವಾಮೀಜಿ ಆಶೀರ್ವಾದ

Sampriya
ಭಾನುವಾರ, 31 ಆಗಸ್ಟ್ 2025 (13:51 IST)
Photo Credit X
ಉಡುಪಿ: ಡಿಸಿಎಂ ಡಿಕೆ ಶಿವಕುಮಾರ್ ಒಬ್ಬರೇ ಓಪನ್ ಆಗಿ ಭಗವದ್ಗೀತೆ ಪಟಿಸುವ ಏಕೈಕ ರಾಜಕಾರಣಿ. ರಾಜ್ಯಕ್ಕೆ ಹಾಗೂ ದೇಶಕ್ಕೆ ಇನ್ನಷ್ಟು ಅವರ ಸೇವೆ ದೊರಕಲಿ. ಭಗವದ್ಗೀತೆ ಪುಸ್ತಕ ಪಡೆದಿರುವ ಡಿಕೆಶಿ ಅವರ ಮನಸ್ಸಿನ ಇಚ್ಚೆ ಫಲಿಸಲೆಂದು ಪುತ್ತಿಗೆ ಮಠದ  ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಾದಿಸಿದರು.

ಡಿಕೆಶಿ ಜೊತೆ ಪುತ್ತಿಗೆ ಮಠಕ್ಕೆ 35 ವರ್ಷದ ಸಂಬಂಧವಿದೆ. ಡಿಕೆ ಜೈಲ್ ಮಂತ್ರಿ ಆಗಿದ್ದರು, ಕೃಷ್ಣ ಹುಟ್ಟಿದ್ದು ಜೈಲಿನಲ್ಲೇ. ಅವರು ಶ್ರೀಕೃಷ್ಣನ ದೊಡ್ಡ ಭಕ್ತ, ಭಗವದ್ಗೀತೆಯನ್ನು ಬಹಳ ಅನುಸರಿಸುತ್ತಾರೆ ಎಂದು ಮಠದ ರಾಜಾಂಗಣದಲ್ಲಿ ನಡೆದ ತಮ್ಮ ಜನ್ಮ ನಕ್ಷತ್ರ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಮುಂದೆಯೇ ಮಾತನಾಡಿದರು. 

ಶ್ರೀ ಮಧ್ವಾಚಾರ್ಯರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ ಮಾಡಿದ್ದು, ಶ್ರೀ ಮಧ್ವಾಚಾರ್ಯರಿಗೆ ಬಂಡೆಕಲ್ಲು ಇಷ್ಟ. ಅವರು ಹನುಮನ ಅಪರಾವತಾರ. ಡಿಕೆಶಿ ಕನಕಪುರದ ಬಂಡೆ ಎಂದರು. 

ರಾಕ್‌ಸ್ಟಾರ್ ರಾಜಕಾರಣಿಯಾಗಿರುವ ಡಿಕೆಶಿ ಮಠದಲ್ಲಿ ಕೋಟಿ ಗೀತಾ ಲೇಖನ ಪುಸ್ತಕ ಪಡೆದಿದ್ದಾರೆ. ಅವರು ಪುಸ್ತಕ ಬರೆದು ಮುಗಿಸುವುದರೊಳಗೆ ಅವರ ಮನಸ್ಸಿನ ಇಚ್ಛೆ ಫಲಿಸಲಿ ಎಂದು ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು ಪುತ್ತಿಗೆ ಸ್ವಾಮೀಜಿ ಆಶೀರ್ವದಿಸಿದರು.

ರಾಜಕಾರಣಿಗಳು ಆಸ್ತಿಕರಾಗುವುದು ಬಹಳ ಮುಖ್ಯ. ರಾಜಕಾರಣಿಗಳು ಆಸ್ತಿಕರಾದರೆ ಮಾತ್ರ ಜಗತ್ತು ಕ್ಷೇಮವಾಗಿರಲು ಸಾಧ್ಯ ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಮಗಳು ಹಾಗೆಲ್ಲಾ ಮಾಡಲ್ಲ: ಉಗ್ರ ಮಹಿಳಾ ನಾಯಕಿ ಡಾ ಶಾಹೀನ್ ತಂದೆಯ ವಾದ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಸವನಗುಡಿ ಕಡಲೆಕಾಯಿ ಪರಿಷೆ ಯಾವಾಗ ಆರಂಭ, ಈ ಬಾರಿ ಹೊಸ ನಿಯಮವೇನು ಇಲ್ಲಿದೆ ವಿವರ

ಬಿಹಾರ ಚುನಾವಣೆ ನಂತರ ರಾಹುಲ್ ಗಾಂಧಿ ಭವಿಷ್ಯವೇ ಬದಲಾಗಬಹುದು

ಆಪರೇಷನ್ ಸಿಂಧೂರ್ ಗೆ ಮೊದಲು ಆಪರೇಷನ್ indoor ಮಾಡಬೇಕಿದೆ

ಮುಂದಿನ ಸುದ್ದಿ
Show comments