Select Your Language

Notifications

webdunia
webdunia
webdunia
webdunia

ರಾಹುಲ್​​ ವಿರುದ್ಧ ಮಾಯಾವತಿ ಕಿಡಿ

Mayawati sparked against Rahul
ಬಿಜೆಪಿಗೆ ಮುಕ್ತ ಅವಕಾಶ ನೀಡಲು ಬಿಎಸ್​​​ಪಿ ನಾಯಕಿ ಮಾಯಾವತಿ ನಮ್ಮ ಮೈತ್ರಿ ಪ್ರಸ್ತಾಪವನ್ನು ತಿರಸ್ಕರಿಸಿದ್ದರು ಎಂದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಾಯಾವತಿ ತಿರುಗೇಟು ನೀಡಿದ್ದಾರೆ. ರಾಹುಲ್​ಗೆ ಸ್ವಂತ ಮನೆಯನ್ನೇ ಸರಿಯಾಗಿ ಕಟ್ಟಿಕೊಳ್ಳಲು ಆಗುತ್ತಿಲ್ಲ. ಬಿಸ್​​ಪಿಯನ್ನು ದೂಷಿಸುತ್ತಿದ್ದಾರೆ ಅಂತಾ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಹೇಳಿರುವುದು ಸಂಪೂರ್ಣ ಸುಳ್ಳು ಎಂದು ಪ್ರತಿಪಾದಿಸಿದ ಮಾಯಾವತಿ, ರಾಹುಲ್ ಗಾಂಧಿ ಇಂತಹ ಸಣ್ಣ ವಿಷಯಗಳ ಬದಲಾಗಿ ಯುಪಿ ಚುನಾವಣೆಯ ಸೋಲಿನ ಬಗ್ಗೆ ಗಮನ ಹರಿಸಬೇಕು ಎಂದರು. ಕಾಂಗ್ರೆಸ್ ಇಂತಹ ಟೀಕೆಗಳನ್ನು ಮಾಡುವ ಮೊದಲು 100 ಬಾರಿ ಯೋಚಿಸಬೇಕು. ಬಿಜೆಪಿ ಎದುರು ಗೆಲ್ಲಲು ಸಾಧ್ಯವಾಗಲಿಲ್ಲ. ಆದ್ದರಿಂದ ಇಂತಹ ಟೀಕೆ, ದೋಷರೋಪಗಳನ್ನು ಮಾಡುತ್ತಿದ್ದಾರೆ ಅಂತ ರಾಹುಲ್​ ವಿರುದ್ಧ ಬಿಎಸ್​​​ಪಿ ಮುಖ್ಯಸ್ಥೆ ಮಾಯಾವತಿ ವಾಗ್ದಾಳಿ ನಡೆಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಿ ಮಾಲೀಕರಾದ್ರು ರಾಘಣ್ಣ..!