Webdunia - Bharat's app for daily news and videos

Install App

ರೈತ ದಸರಾ ಉದ್ಘಾಟಿಸಿದ ಮೇಯರ್ ರವಿಕುಮಾರ್

Webdunia
ಶುಕ್ರವಾರ, 22 ಸೆಪ್ಟಂಬರ್ 2017 (20:17 IST)
ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ಇಂದಿನಿಂದ ಮೂರು ದಿನಗಳ ಕಾಲ ಜೆ.ಕೆ.ಮೈದಾನದಲ್ಲಿ ರೈತ ದಸರಾ ನಡೆಯಲಿದೆ. ಈ ನಿಟ್ಟಿನಲ್ಲಿ ಅರಮನೆ ಮುಂಭಾಗ ಕೋಟೆ ಅಂಜನೇಯಸ್ವಾಮಿ ಮುಂಭಾಗ ರೈತದಸರಾ ಮೆರವಣಿಗೆಗೆ ಚಾಲನೆ ನೀಡಿದರು.

ರೈತರಿಗೆ ಉಪಯುಕ್ತವಾಗುವ ನೀರು ಸಂರಕ್ಷಣೆ, ತೋಟಗಾರಿಕೆ ಇಲಾಖೆ, ಕೃಷಿ ಅಭಿಯಾನ, ಕ್ಷೀರ ಭಾಗ್ಯ,ಮೀನುಗಾರಿಕೆ ಇಲಾಖೆಗಳ ಸ್ಥಬ್ಧ ಚಿತ್ರಗಳು, ಎತ್ತಿನ ಗಾಡಿ, ಸಾಕು ಪ್ರಾಣಿಗಳಾದ ಕುರಿ ಸೇರಿದಂತೆ ನಂದಿ ಕಂಬ, ಕುಂಭ ಹೊತ್ತ ಮಹಿಳೆಯರು, ಸಾಂಸ್ಕೃತಿಕ ಕಲಾ ತಂಡಗಳು ಎಲ್ಲರ ಗಮನ ಸೆಳೆಯಿತು. ಎತ್ತಿನಗಾಡಿ ಓಡಿಸುವ ಮೂಲಕ ಮೇಯರ್ ಎಂ.ಜೆ.ರವಿಕುಮಾರ್ ರೈತ ದಸರಾಗೆ ಚಾಲನೆ ನೀಡಿದರು.

ಇದೇವೇಳೆ ಮಾತನಾಡಿದ ಮೇಯರ್ ರವಿಕುಮಾರ್, ಈ ಬಾರಿ ದಸರಾ ಮಹೋತ್ಸವವನ್ನು ರೈತದಸರಾ ಎಂದು ಘೋಷಣೆ ಮಾಡಬೇಕೆಂದು ಬಯಸಿದ್ದೆವು. 15 ದಿನದಿಂದ ರಾಜ್ಯಾದ್ಯಂತ ಉತ್ತಮ ಮಳೆಯಾದ್ದರಿಂದ ಈ ದಸರಾವನ್ನು ರೈತರಿಗೆ ಸಮರ್ಪಿಸಬೇಕೆಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments